caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya الجاثية

37 ಆಯತ್‌ಗಳು · ಮಕ್ಕಾ · ಅವತರಣ ಕ್ರಮ 65

بِسْمِ ٱللَّهِ ٱلرَّحْمَٰنِ ٱلرَّحِيمِ حمٓ

Kannada Translation - Hamza Buturಹಾ-ಮೀಮ್.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تَنزِيلُ ٱلْكِتَٰبِ مِنَ ٱللَّهِ ٱلْعَزِيزِ ٱلْحَكِيمِ

Kannada Translation - Hamza Buturಈ ಗ್ರಂಥವು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಿಂದ ಅವತೀರ್ಣವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ فِى ٱلسَّمَٰوَٰتِ وَٱلْأَرْضِ لَـَٔايَٰتٍ لِّلْمُؤْمِنِينَ

Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿ ಸತ್ಯವಿಶ್ವಾಸಿಗಳಿಗೆ ಅನೇಕ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَفِى خَلْقِكُمْ وَمَا يَبُثُّ مِن دَآبَّةٍ ءَايَٰتٌ لِّقَوْمٍ يُوقِنُونَ

Kannada Translation - Hamza Buturನಿಮ್ಮ ಸೃಷ್ಟಿಯಲ್ಲೂ ಮತ್ತು ಅವನು ಜೀವಿಗಳನ್ನು ಹಬ್ಬಿಸಿರುವುದರಲ್ಲೂ ದೃಢವಿಶ್ವಾಸವಿಡುವ ಜನರಿಗೆ ಅನೇಕ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱخْتِلَٰفِ ٱلَّيْلِ وَٱلنَّهَارِ وَمَآ أَنزَلَ ٱللَّهُ مِنَ ٱلسَّمَآءِ مِن رِّزْقٍ فَأَحْيَا بِهِ ٱلْأَرْضَ بَعْدَ مَوْتِهَا وَتَصْرِيفِ ٱلرِّيَٰحِ ءَايَٰتٌ لِّقَوْمٍ يَعْقِلُونَ

Kannada Translation - Hamza Buturರಾತ್ರಿ-ಹಗಲುಗಳ ಬದಲಾವಣೆಯಲ್ಲಿ, ಅಲ್ಲಾಹು ಆಕಾಶದಿಂದ ಆಹಾರವನ್ನು (ಮಳೆಯನ್ನು) ಇಳಿಸಿ ತನ್ಮೂಲಕ ಭೂಮಿಗೆ ಅದು ನಿರ್ಜೀವವಾದ ಬಳಿಕ ಜೀವ ನೀಡುವುದರಲ್ಲಿ ಮತ್ತು ಗಾಳಿಯ ನಿಯಂತ್ರಣದಲ್ಲಿ ಆಲೋಚಿಸುವ ಜನರಿಗೆ ಅನೇಕ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

تِلْكَ ءَايَٰتُ ٱللَّهِ نَتْلُوهَا عَلَيْكَ بِٱلْحَقِّ فَبِأَىِّ حَدِيثٍۭ بَعْدَ ٱللَّهِ وَءَايَٰتِهِۦ يُؤْمِنُونَ

Kannada Translation - Hamza Buturಇವು ಅಲ್ಲಾಹನ ವಚನಗಳಾಗಿದ್ದು, ನಾವು ಅವುಗಳನ್ನು ನಿಮಗೆ ಸತ್ಯ ಸಮೇತವಾಗಿ ಓದಿಕೊಡುತ್ತಿದ್ದೇವೆ. ಅಲ್ಲಾಹು ಮತ್ತು ಅವನ ವಚನಗಳ ನಂತರ ಇನ್ನು ಯಾವ ಮಾತಿನಲ್ಲಿ ಅವರು ವಿಶ್ವಾಸವಿಡುವರು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيْلٌ لِّكُلِّ أَفَّاكٍ أَثِيمٍ

Kannada Translation - Hamza Buturಪ್ರತಿಯೊಬ್ಬ ಸುಳ್ಳುಗಾರ ಮತ್ತು ಪಾಪಿಗೆ ವಿನಾಶ ಕಾದಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَسْمَعُ ءَايَٰتِ ٱللَّهِ تُتْلَىٰ عَلَيْهِ ثُمَّ يُصِرُّ مُسْتَكْبِرًا كَأَن لَّمْ يَسْمَعْهَا فَبَشِّرْهُ بِعَذَابٍ أَلِيمٍ

Kannada Translation - Hamza Buturತನಗೆ ಓದಿಕೊಡಲಾಗುವ ಅಲ್ಲಾಹನ ವಚನಗಳಿಗೆ ಅವನು ಕಿವಿಗೊಡುತ್ತಾನೆ. ನಂತರ ಅದನ್ನು ಕೇಳಿಯೇ ಇಲ್ಲ ಎಂಬಂತೆ ಅಹಂಕಾರದಿಂದ ಹಟತೊಟ್ಟು ನಿಲ್ಲುತ್ತಾನೆ. ಅವನಿಗೆ ಯಾತನಾಮಯ ಶಿಕ್ಷೆಯ ಬಗ್ಗೆ ಸುವಾರ್ತೆಯನ್ನು ತಿಳಿಸಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا عَلِمَ مِنْ ءَايَٰتِنَا شَيْـًٔا ٱتَّخَذَهَا هُزُوًا أُو۟لَٰٓئِكَ لَهُمْ عَذَابٌ مُّهِينٌ

Kannada Translation - Hamza Buturಅವನು ನಮ್ಮ ವಚನಗಳಿಂದ ಏನಾದರೂ ತಿಳಿದುಕೊಂಡರೆ ಅದನ್ನು ತಮಾಷೆಯಾಗಿ ಸ್ವೀಕರಿಸುತ್ತಾನೆ. ಅಂತಹ ಜನರಿಗೆ ಅವಮಾನಕರ ಶಿಕ್ಷೆಯಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مِّن وَرَآئِهِمْ جَهَنَّمُ وَلَا يُغْنِى عَنْهُم مَّا كَسَبُوا۟ شَيْـًٔا وَلَا مَا ٱتَّخَذُوا۟ مِن دُونِ ٱللَّهِ أَوْلِيَآءَ وَلَهُمْ عَذَابٌ عَظِيمٌ

Kannada Translation - Hamza Buturನರಕಾಗ್ನಿ ಅವರ ಮುಂಭಾಗದಲ್ಲೇ ಇದೆ! ಅವರು ಏನು ಸಂಪಾದಿಸಿದರೋ ಮತ್ತು ಅವರು ಅಲ್ಲಾಹನನ್ನು ಬಿಟ್ಟು ಯಾರನ್ನು ರಕ್ಷಕರನ್ನಾಗಿ ಸ್ವೀಕರಿಸಿದರೋ ಯಾವುದೂ ಅವರಿಗೆ ಪ್ರಯೋಜನ ನೀಡುವುದಿಲ್ಲ. ಅವರಿಗೆ ಕಠೋರ ಶಿಕ್ಷೆಯಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هَٰذَا هُدًى وَٱلَّذِينَ كَفَرُوا۟ بِـَٔايَٰتِ رَبِّهِمْ لَهُمْ عَذَابٌ مِّن رِّجْزٍ أَلِيمٌ

Kannada Translation - Hamza Buturಇದು ಸನ್ಮಾರ್ಗವಾಗಿದೆ. ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ನಿಷೇಧಿಸಿದವರು ಯಾರೋ ಅವರಿಗೆ ಬಹಳ ಕಠೋರವಾದ ಯಾತನಾಮಯ ಶಿಕ್ಷೆಯಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ٱللَّهُ ٱلَّذِى سَخَّرَ لَكُمُ ٱلْبَحْرَ لِتَجْرِىَ ٱلْفُلْكُ فِيهِ بِأَمْرِهِۦ وَلِتَبْتَغُوا۟ مِن فَضْلِهِۦ وَلَعَلَّكُمْ تَشْكُرُونَ

Kannada Translation - Hamza Buturಅಲ್ಲಾಹನೇ ನಿಮಗೆ ಸಮುದ್ರವನ್ನು ಅಧೀನಗೊಳಿಸಿದವನು. ಅವನ ಅಪ್ಪಣೆಯಂತೆ ನಾವೆಗಳು ಅದರಲ್ಲಿ ಸಂಚರಿಸುವುದಕ್ಕಾಗಿ, ನೀವು ಅವನ ಔದಾರ್ಯದಿಂದ ಬೇಡಿಕೊಳ್ಳುವುದಕ್ಕಾಗಿ ಮತ್ತು ನೀವು ಕೃತಜ್ಞರಾಗುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَسَخَّرَ لَكُم مَّا فِى ٱلسَّمَٰوَٰتِ وَمَا فِى ٱلْأَرْضِ جَمِيعًا مِّنْهُ إِنَّ فِى ذَٰلِكَ لَـَٔايَٰتٍ لِّقَوْمٍ يَتَفَكَّرُونَ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳನ್ನು ಅವನು ತನ್ನ ವತಿಯಿಂದ ನಿಮಗೆ ಅಧೀನಗೊಳಿಸಿದ್ದಾನೆ. ನಿಶ್ಚಯವಾಗಿಯೂ ಆಲೋಚಿಸುವ ಜನರಿಗೆ ಅದರಲ್ಲಿ ಅನೇಕ ದೃಷ್ಟಾಂತಗಳಿವೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُل لِّلَّذِينَ ءَامَنُوا۟ يَغْفِرُوا۟ لِلَّذِينَ لَا يَرْجُونَ أَيَّامَ ٱللَّهِ لِيَجْزِىَ قَوْمًۢا بِمَا كَانُوا۟ يَكْسِبُونَ

Kannada Translation - Hamza Buturಅಲ್ಲಾಹನ ದಿನಗಳನ್ನು ನಿರೀಕ್ಷಿಸದ ಸತ್ಯನಿಷೇಧಿಗಳಿಗೆ ಅವರು ಕ್ಷಮಿಸಿ ಬಿಡಲಿ ಎಂದು ಸತ್ಯವಿಶ್ವಾಸಿಗಳೊಡನೆ ಹೇಳಿರಿ. ಇದು ಅಲ್ಲಾಹು ಆ ಜನರಿಗೆ ಅವರು ಮಾಡಿದ ಕರ್ಮಗಳ ಫಲವನ್ನು ನೀಡುವುದಕ್ಕಾಗಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَنْ عَمِلَ صَٰلِحًا فَلِنَفْسِهِۦ وَمَنْ أَسَآءَ فَعَلَيْهَا ثُمَّ إِلَىٰ رَبِّكُمْ تُرْجَعُونَ

Kannada Translation - Hamza Buturಯಾರಾದರೂ ಒಳಿತು ಮಾಡಿದರೆ ಅದು ಅವನ ಒಳಿತಿಗೇ ಆಗಿದೆ. ಯಾರಾದರೂ ಕೆಡುಕು ಮಾಡಿದರೆ ಅದರ ಕೆಡುಕು ಅವನಿಗೇ ಆಗಿದೆ. ನಂತರ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ನಿಮ್ಮನ್ನು ಮರಳಿಸಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَقَدْ ءَاتَيْنَا بَنِىٓ إِسْرَٰٓءِيلَ ٱلْكِتَٰبَ وَٱلْحُكْمَ وَٱلنُّبُوَّةَ وَرَزَقْنَٰهُم مِّنَ ٱلطَّيِّبَٰتِ وَفَضَّلْنَٰهُمْ عَلَى ٱلْعَٰلَمِينَ

Kannada Translation - Hamza Buturನಾವು ಇಸ್ರಾಯೇಲ್ ಮಕ್ಕಳಿಗೆ ಗ್ರಂಥ, ಜ್ಞಾನ ಮತ್ತು ಪ್ರವಾದಿತ್ವವನ್ನು ನೀಡಿದೆವು, ಶುದ್ಧ ವಸ್ತುಗಳಿಂದ ಅವರಿಗೆ ಆಹಾರವನ್ನು ಒದಗಿಸಿದೆವು ಮತ್ತು ಜಗತ್ತಿನ ಎಲ್ಲಾ (ಸಮಕಾಲೀನ) ಜನರಿಗಿಂತ ನಾವು ಅವರಿಗೆ ಶ್ರೇಷ್ಠತೆಯನ್ನು ನೀಡಿದೆವು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَءَاتَيْنَٰهُم بَيِّنَٰتٍ مِّنَ ٱلْأَمْرِ فَمَا ٱخْتَلَفُوٓا۟ إِلَّا مِنۢ بَعْدِ مَا جَآءَهُمُ ٱلْعِلْمُ بَغْيًۢا بَيْنَهُمْ إِنَّ رَبَّكَ يَقْضِى بَيْنَهُمْ يَوْمَ ٱلْقِيَٰمَةِ فِيمَا كَانُوا۟ فِيهِ يَخْتَلِفُونَ

Kannada Translation - Hamza Buturನಾವು ಅವರಿಗೆ (ಧಾರ್ಮಿಕ) ವಿಷಯಗಳ ಬಗ್ಗೆ ಸ್ಪಷ್ಟ ಪುರಾವೆಗಳನ್ನು ನೀಡಿದೆವು. ಆದರೆ ಅವರಿಗೆ ಜ್ಞಾನವು ಬಂದ ಬಳಿಕವೇ ಹೊರತು ಅವರು ಭಿನ್ನಮತ ತಳೆಯಲಿಲ್ಲ. ಅವರು ಪರಸ್ಪರ ಹೊಂದಿದ್ದ ದ್ವೇಷವೇ ಅದಕ್ಕೆ ಕಾರಣವಾಗಿತ್ತು. ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಅವರು ಭಿನ್ನಮತ ತಳೆದರೋ ಆ ವಿಷಯದಲ್ಲಿ ಪುನರುತ್ಥಾನ ದಿನದಂದು ನಿಮ್ಮ ಪರಿಪಾಲಕನು (ಅಲ್ಲಾಹು) ಅವರ ನಡುವೆ ತೀರ್ಪು ನೀಡುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ثُمَّ جَعَلْنَٰكَ عَلَىٰ شَرِيعَةٍ مِّنَ ٱلْأَمْرِ فَٱتَّبِعْهَا وَلَا تَتَّبِعْ أَهْوَآءَ ٱلَّذِينَ لَا يَعْلَمُونَ

Kannada Translation - Hamza Buturನಂತರ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ನಿಲ್ಲಿಸಿದೆವು. ಆದ್ದರಿಂದ ನೀವು ಅದನ್ನು ಅನುಸರಿಸಿರಿ. ತಿಳುವಳಿಕೆಯಿಲ್ಲದ ಜನರ ಸ್ವೇಚ್ಛೆಗಳನ್ನು ಅನುಸರಿಸಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّهُمْ لَن يُغْنُوا۟ عَنكَ مِنَ ٱللَّهِ شَيْـًٔا وَإِنَّ ٱلظَّٰلِمِينَ بَعْضُهُمْ أَوْلِيَآءُ بَعْضٍ وَٱللَّهُ وَلِىُّ ٱلْمُتَّقِينَ

Kannada Translation - Hamza Buturಅಲ್ಲಾಹನ ಮುಂದೆ ಇವರು ಯಾವ ರೀತಿಯಲ್ಲೂ ನಿಮಗೆ ಉಪಕಾರ ಮಾಡುವುದಿಲ್ಲ. ನಿಶ್ಚಯವಾಗಿಯೂ ಅಕ್ರಮಿಗಳು ಪರಸ್ಪರ ಮಿತ್ರರಾಗಿದ್ದಾರೆ. ಅಲ್ಲಾಹು ದೇವಭಯವುಳ್ಳವರ ರಕ್ಷಕನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هَٰذَا بَصَٰٓئِرُ لِلنَّاسِ وَهُدًى وَرَحْمَةٌ لِّقَوْمٍ يُوقِنُونَ

Kannada Translation - Hamza Buturಇದು (ಕುರ್‌ಆನ್) ಮನುಷ್ಯರಿಗೆ ಒಳದೃಷ್ಟಿಯಾಗಿದೆ ಮತ್ತು ದೃಢವಿಶ್ವಾಸವಿಡುವ ಜನರಿಗೆ ಸನ್ಮಾರ್ಗ ಹಾಗೂ ದಯೆಯಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمْ حَسِبَ ٱلَّذِينَ ٱجْتَرَحُوا۟ ٱلسَّيِّـَٔاتِ أَن نَّجْعَلَهُمْ كَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ سَوَآءً مَّحْيَاهُمْ وَمَمَاتُهُمْ سَآءَ مَا يَحْكُمُونَ

Kannada Translation - Hamza Buturಕೆಡುಕು ಮಾಡಿದವರು ಯಾರೋ ಅವರನ್ನು ನಾವು ಸತ್ಯವಿಶ್ವಾಸಿಗಳಾಗಿದ್ದು ಸತ್ಕರ್ಮವೆಸಗುವವರಂತೆ—ಅವರಿಬ್ಬರ ಜೀವನ ಮತ್ತು ಮರಣಗಳು ಸಮಾನವಾಗುವ ರೀತಿಯಲ್ಲಿ—ಮಾಡುವೆವೆಂದು ಭಾವಿಸಿದ್ದಾರೆಯೇ? ಅವರು ನೀಡುವ ತೀರ್ಪು ಬಹಳ ನಿಕೃಷ್ಟವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَخَلَقَ ٱللَّهُ ٱلسَّمَٰوَٰتِ وَٱلْأَرْضَ بِٱلْحَقِّ وَلِتُجْزَىٰ كُلُّ نَفْسٍۭ بِمَا كَسَبَتْ وَهُمْ لَا يُظْلَمُونَ

Kannada Translation - Hamza Buturಅಲ್ಲಾಹು ಭೂಮ್ಯಾಕಾಶಗಳನ್ನು ಸತ್ಯ ಸಮೇತ ಸೃಷ್ಟಿಸಿದ್ದಾನೆ. ಪ್ರತಿಯೊಬ್ಬನಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ನೀಡುವುದಕ್ಕಾಗಿ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَرَءَيْتَ مَنِ ٱتَّخَذَ إِلَٰهَهُۥ هَوَىٰهُ وَأَضَلَّهُ ٱللَّهُ عَلَىٰ عِلْمٍ وَخَتَمَ عَلَىٰ سَمْعِهِۦ وَقَلْبِهِۦ وَجَعَلَ عَلَىٰ بَصَرِهِۦ غِشَٰوَةً فَمَن يَهْدِيهِ مِنۢ بَعْدِ ٱللَّهِ أَفَلَا تَذَكَّرُونَ

Kannada Translation - Hamza Buturತನ್ನ ಸ್ವೇಚ್ಛೆಯನ್ನೇ ದೇವನನ್ನಾಗಿ ಮಾಡಿಕೊಂಡವನನ್ನು ನೀವು ನೋಡಿದ್ದೀರಾ?[1] ಅಲ್ಲಾಹು ತಿಳಿದೇ ಅವನನ್ನು ದಾರಿತಪ್ಪಿಸಿದ್ದಾನೆ, ಅವನ ಕಿವಿ ಮತ್ತು ಹೃದಯಕ್ಕೆ ಮೊಹರು ಹಾಕಿದ್ದಾನೆ ಮತ್ತು ಅವನ ಕಣ್ಣಿನ ಮೇಲೆ ಒಂದು ಪರದೆಯನ್ನಿಟ್ಟಿದ್ದಾನೆ. ಅಲ್ಲಾಹನ ನಂತರ ಅವನಿಗೆ ಸನ್ಮಾರ್ಗ ತೋರಿಸುವವರು ಯಾರು? ನೀವು ಉಪದೇಶ ಸ್ವೀಕರಿಸುವುದಿಲ್ಲವೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقَالُوا۟ مَا هِىَ إِلَّا حَيَاتُنَا ٱلدُّنْيَا نَمُوتُ وَنَحْيَا وَمَا يُهْلِكُنَآ إِلَّا ٱلدَّهْرُ وَمَا لَهُم بِذَٰلِكَ مِنْ عِلْمٍ إِنْ هُمْ إِلَّا يَظُنُّونَ

Kannada Translation - Hamza Buturಅವರು ಹೇಳಿದರು: “ಜೀವನವೆಂದರೆ ನಮ್ಮ ಇಹಲೋಕ ಜೀವನ ಮಾತ್ರವಾಗಿದೆ. ನಾವು ಸಾಯುತ್ತೇವೆ ಮತ್ತು ಬದುಕುತ್ತೇವೆ. ಕಾಲವಲ್ಲದೆ ಬೇರೇನೂ ನಮ್ಮನ್ನು ನಾಶ ಮಾಡುವುದಿಲ್ಲ.” ವಾಸ್ತವವಾಗಿ ಅವರಿಗೆ ಅದರ ಬಗ್ಗೆ ಯಾವುದೇ ಜ್ಞಾನವಿಲ್ಲ. ಅವರು ಕೇವಲ ಊಹಿಸಿ ಹೇಳುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا تُتْلَىٰ عَلَيْهِمْ ءَايَٰتُنَا بَيِّنَٰتٍ مَّا كَانَ حُجَّتَهُمْ إِلَّآ أَن قَالُوا۟ ٱئْتُوا۟ بِـَٔابَآئِنَآ إِن كُنتُمْ صَٰدِقِينَ

Kannada Translation - Hamza Buturನಮ್ಮ ಸ್ಪಷ್ಟ ವಚನಗಳನ್ನು ಅವರಿಗೆ ಓದಿಕೊಡಲಾದರೆ ಅವರು ಹೇಳುವ ತರ್ಕವು: “ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು ಕರೆತನ್ನಿರಿ” ಎಂದು ಮಾತ್ರವಾಗಿರುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

قُلِ ٱللَّهُ يُحْيِيكُمْ ثُمَّ يُمِيتُكُمْ ثُمَّ يَجْمَعُكُمْ إِلَىٰ يَوْمِ ٱلْقِيَٰمَةِ لَا رَيْبَ فِيهِ وَلَٰكِنَّ أَكْثَرَ ٱلنَّاسِ لَا يَعْلَمُونَ

Kannada Translation - Hamza Buturಹೇಳಿರಿ: “ಅಲ್ಲಾಹು ನಿಮಗೆ ಜೀವ ನೀಡುತ್ತಾನೆ. ನಂತರ ಅವನು ಸಾವನ್ನು ನೀಡುತ್ತಾನೆ. ನಂತರ ಪುನರುತ್ಥಾನ ದಿನದಂದು ಅವನು ನಿಮ್ಮನ್ನು ಒಟ್ಟುಗೂಡಿಸುತ್ತಾನೆ. ಅದರಲ್ಲಿ ಸಂಶಯವೇ ಇಲ್ಲ. ಆದರೆ ಜನರಲ್ಲಿ ಹೆಚ್ಚಿನವರು ಅರ್ಥಮಾಡಿಕೊಳ್ಳುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلِلَّهِ مُلْكُ ٱلسَّمَٰوَٰتِ وَٱلْأَرْضِ وَيَوْمَ تَقُومُ ٱلسَّاعَةُ يَوْمَئِذٍ يَخْسَرُ ٱلْمُبْطِلُونَ

Kannada Translation - Hamza Buturಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅಂತ್ಯಸಮಯವು ಅಸ್ತಿತ್ವಕ್ಕೆ ಬರುವ ದಿನದಂದು ಮಿಥ್ಯವಾದಿಗಳು ನಷ್ಟ ಹೊಂದುವರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَتَرَىٰ كُلَّ أُمَّةٍ جَاثِيَةً كُلُّ أُمَّةٍ تُدْعَىٰٓ إِلَىٰ كِتَٰبِهَا ٱلْيَوْمَ تُجْزَوْنَ مَا كُنتُمْ تَعْمَلُونَ

Kannada Translation - Hamza Butur(ಆ ದಿನ) ಎಲ್ಲ ಸಮುದಾಯಗಳನ್ನು ಮಂಡಿಯೂರಿದ ಸ್ಥಿತಿಯಲ್ಲಿ ನೀವು ನೋಡುವಿರಿ. ಪ್ರತಿಯೊಂದು ಸಮುದಾಯವನ್ನೂ ಅದರ ಕರ್ಮದಾಖಲೆಯ ಕಡೆಗೆ ಕರೆಯಲಾಗುವುದು. “ನೀವು ಮಾಡಿರುವ ಕರ್ಮಗಳಿಗೆ ಇಂದು ನಿಮಗೆ ಪ್ರತಿಫಲ ನೀಡಲಾಗುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هَٰذَا كِتَٰبُنَا يَنطِقُ عَلَيْكُم بِٱلْحَقِّ إِنَّا كُنَّا نَسْتَنسِخُ مَا كُنتُمْ تَعْمَلُونَ

Kannada Translation - Hamza Buturಇದು ನಮ್ಮ ದಾಖಲೆಯಾಗಿದ್ದು ಇದು ನಿಮ್ಮ ಬಗ್ಗೆ ಸತ್ಯವನ್ನು ಹೇಳಲಿದೆ. ನಿಶ್ಚಯವಾಗಿಯೂ ನೀವು ಮಾಡುತ್ತಿದ್ದ ಎಲ್ಲಾ ಕರ್ಮಗಳನ್ನು ನಾವು ದಾಖಲಿಸುತ್ತಿದ್ದೆವು.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَأَمَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ فَيُدْخِلُهُمْ رَبُّهُمْ فِى رَحْمَتِهِۦ ذَٰلِكَ هُوَ ٱلْفَوْزُ ٱلْمُبِينُ

Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರನ್ನು ಅವರ ಪರಿಪಾಲಕನು (ಅಲ್ಲಾಹು) ಅವನ ದಯೆಯಲ್ಲಿ ಸೇರಿಸುವನು. ಅದೇ ಸ್ಪಷ್ಟವಾದ ವಿಜಯ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَأَمَّا ٱلَّذِينَ كَفَرُوٓا۟ أَفَلَمْ تَكُنْ ءَايَٰتِى تُتْلَىٰ عَلَيْكُمْ فَٱسْتَكْبَرْتُمْ وَكُنتُمْ قَوْمًا مُّجْرِمِينَ

Kannada Translation - Hamza Buturಸತ್ಯನಿಷೇಧಿಗಳು ಯಾರೋ (ಅವರೊಡನೆ ಹೇಳಲಾಗುವುದು:) “ನನ್ನ ವಚನಗಳನ್ನು ನಿಮಗೆ ಓದಿಕೊಡಲಾಗಿಲ್ಲವೇ? ಆದರೂ ನೀವು ಅಹಂಕಾರ ತೋರಿದಿರಿ ಮತ್ತು ಪಾಪಿಗಳಾದ ಜನರಾಗಿದ್ದಿರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَإِذَا قِيلَ إِنَّ وَعْدَ ٱللَّهِ حَقٌّ وَٱلسَّاعَةُ لَا رَيْبَ فِيهَا قُلْتُم مَّا نَدْرِى مَا ٱلسَّاعَةُ إِن نَّظُنُّ إِلَّا ظَنًّا وَمَا نَحْنُ بِمُسْتَيْقِنِينَ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ ಮತ್ತು ಅಂತ್ಯಸಮಯದ ವಿಷಯದಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಲಾದರೆ, ಅಂತ್ಯಸಮಯವೇನೆಂದು ನಮಗೆ ತಿಳಿದಿಲ್ಲ. ನಮಗೆ ಕೆಲವು ಕಲ್ಪನೆಗಳಿದ್ದವು. ನಮಗೆ ಯಾವುದರ ಬಗ್ಗೆಯೂ ಖಾತ್ರಿಯಿರಲಿಲ್ಲ ಎಂದು ನೀವು ಉತ್ತರಿಸಿದಿರಿ.”

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَبَدَا لَهُمْ سَيِّـَٔاتُ مَا عَمِلُوا۟ وَحَاقَ بِهِم مَّا كَانُوا۟ بِهِۦ يَسْتَهْزِءُونَ

Kannada Translation - Hamza Buturಅವರು ಮಾಡಿದ ಕರ್ಮಗಳ ಕೆಡುಕುಗಳು ಅವರಿಗೆ ಗೋಚರವಾಗುವುದು ಮತ್ತು ಅವರು ಏನನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸುವುದು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَقِيلَ ٱلْيَوْمَ نَنسَىٰكُمْ كَمَا نَسِيتُمْ لِقَآءَ يَوْمِكُمْ هَٰذَا وَمَأْوَىٰكُمُ ٱلنَّارُ وَمَا لَكُم مِّن نَّٰصِرِينَ

Kannada Translation - Hamza Buturಅವರೊಡನೆ ಹೇಳಲಾಗುವುದು: “ನಿಮ್ಮ ಈ ದಿನದ ಭೇಟಿಯನ್ನು ನೀವು ಮರೆತುಬಿಟ್ಟಂತೆ ಇಂದು ನಾವು ನಿಮ್ಮನ್ನೂ ಮರೆತಿದ್ದೇವೆ. ನಿಮ್ಮ ವಾಸಸ್ಥಳವು ನರಕವಾಗಿದೆ. ನಿಮಗೆ ಸಹಾಯ ಮಾಡುವವರು ಯಾರೂ ಇಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكُم بِأَنَّكُمُ ٱتَّخَذْتُمْ ءَايَٰتِ ٱللَّهِ هُزُوًا وَغَرَّتْكُمُ ٱلْحَيَوٰةُ ٱلدُّنْيَا فَٱلْيَوْمَ لَا يُخْرَجُونَ مِنْهَا وَلَا هُمْ يُسْتَعْتَبُونَ

Kannada Translation - Hamza Buturಅದೇಕೆಂದರೆ ನೀವು ಅಲ್ಲಾಹನ ವಚನಗಳನ್ನು ತಮಾಷೆಯ ವಸ್ತುವಾಗಿ ಸ್ವೀಕರಿಸಿದಿರಿ ಮತ್ತು ಇಹಲೋಕ ಜೀವನವು ನಿಮ್ಮನ್ನು ಮರುಳುಗೊಳಿಸಿತು. ಇಂದು ಅವರನ್ನು ಅಲ್ಲಿಂದ ಹೊರತೆಗೆಯಲಾಗುವುದಿಲ್ಲ ಮತ್ತು ಅವರ ನೆಪಗಳನ್ನು ಸ್ವೀಕರಿಸಲಾಗುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلِلَّهِ ٱلْحَمْدُ رَبِّ ٱلسَّمَٰوَٰتِ وَرَبِّ ٱلْأَرْضِ رَبِّ ٱلْعَٰلَمِينَ

Kannada Translation - Hamza Buturಆದ್ದರಿಂದ ಭೂಮ್ಯಾಕಾಶಗಳ ಪರಿಪಾಲಕನಾದ ಮತ್ತು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَهُ ٱلْكِبْرِيَآءُ فِى ٱلسَّمَٰوَٰتِ وَٱلْأَرْضِ وَهُوَ ٱلْعَزِيزُ ٱلْحَكِيمُ

Kannada Translation - Hamza Buturಭೂಮ್ಯಾಕಾಶಗಳಲ್ಲಿ ಎಲ್ಲಾ ಮಹಾತ್ಮೆಗಳು ಅವನಿಗೇ ಮೀಸಲು. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70