وَءَاتَيْنَٰهُم بَيِّنَٰتٍ مِّنَ ٱلْأَمْرِ فَمَا ٱخْتَلَفُوٓا۟ إِلَّا مِنۢ بَعْدِ مَا جَآءَهُمُ ٱلْعِلْمُ بَغْيًۢا بَيْنَهُمْ إِنَّ رَبَّكَ يَقْضِى بَيْنَهُمْ يَوْمَ ٱلْقِيَٰمَةِ فِيمَا كَانُوا۟ فِيهِ يَخْتَلِفُونَ
Kannada Translation - Hamza Buturನಾವು ಅವರಿಗೆ (ಧಾರ್ಮಿಕ) ವಿಷಯಗಳ ಬಗ್ಗೆ ಸ್ಪಷ್ಟ ಪುರಾವೆಗಳನ್ನು ನೀಡಿದೆವು. ಆದರೆ ಅವರಿಗೆ ಜ್ಞಾನವು ಬಂದ ಬಳಿಕವೇ ಹೊರತು ಅವರು ಭಿನ್ನಮತ ತಳೆಯಲಿಲ್ಲ. ಅವರು ಪರಸ್ಪರ ಹೊಂದಿದ್ದ ದ್ವೇಷವೇ ಅದಕ್ಕೆ ಕಾರಣವಾಗಿತ್ತು. ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಅವರು ಭಿನ್ನಮತ ತಳೆದರೋ ಆ ವಿಷಯದಲ್ಲಿ ಪುನರುತ್ಥಾನ ದಿನದಂದು ನಿಮ್ಮ ಪರಿಪಾಲಕನು (ಅಲ್ಲಾಹು) ಅವರ ನಡುವೆ ತೀರ್ಪು ನೀಡುವನು.