caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad محمد

38 ಆಯತ್‌ಗಳು · ಮದೀನಾ · ಅವತರಣ ಕ್ರಮ 95

بِسْمِ ٱللَّهِ ٱلرَّحْمَٰنِ ٱلرَّحِيمِ ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ أَضَلَّ أَعْمَٰلَهُمْ

Kannada Translation - Hamza Buturಸತ್ಯವನ್ನು ನಿಷೇಧಿಸಿದವರು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಯಾರೋ ಅವರ ಕರ್ಮಗಳನ್ನು ಅಲ್ಲಾಹು ನಿಷ್ಫಲಗೊಳಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ وَءَامَنُوا۟ بِمَا نُزِّلَ عَلَىٰ مُحَمَّدٍ وَهُوَ ٱلْحَقُّ مِن رَّبِّهِمْ كَفَّرَ عَنْهُمْ سَيِّـَٔاتِهِمْ وَأَصْلَحَ بَالَهُمْ

Kannada Translation - Hamza Buturಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು ಮತ್ತು ಮುಹಮ್ಮದರಿಗೆ ಅವತೀರ್ಣವಾದ ಸಂದೇಶದಲ್ಲಿ—ಅದು ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ—ವಿಶ್ವಾಸವಿಟ್ಟವರು ಯಾರೋ ಅವರ ಕೆಡುಕುಗಳನ್ನು ಅಲ್ಲಾಹು ಅಳಿಸುವನು ಮತ್ತು ಅವರ ಸ್ಥಿತಿಯನ್ನು ಸುಧಾರಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ بِأَنَّ ٱلَّذِينَ كَفَرُوا۟ ٱتَّبَعُوا۟ ٱلْبَٰطِلَ وَأَنَّ ٱلَّذِينَ ءَامَنُوا۟ ٱتَّبَعُوا۟ ٱلْحَقَّ مِن رَّبِّهِمْ كَذَٰلِكَ يَضْرِبُ ٱللَّهُ لِلنَّاسِ أَمْثَٰلَهُمْ

Kannada Translation - Hamza Buturಅದೇಕೆಂದರೆ ಸತ್ಯನಿಷೇಧಿಗಳು ಮಿಥ್ಯವನ್ನು ಅನುಸರಿಸಿದರು ಮತ್ತು ಸತ್ಯವಿಶ್ವಾಸಿಗಳು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವನ್ನು ಅನುಸರಿಸಿದರು. ಈ ರೀತಿ ಅಲ್ಲಾಹು ಜನರಿಗೆ ಅವರ ಸ್ಥಿತಿಗಳನ್ನು ವಿವರಿಸಿಕೊಡುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَإِذَا لَقِيتُمُ ٱلَّذِينَ كَفَرُوا۟ فَضَرْبَ ٱلرِّقَابِ حَتَّىٰٓ إِذَآ أَثْخَنتُمُوهُمْ فَشُدُّوا۟ ٱلْوَثَاقَ فَإِمَّا مَنًّۢا بَعْدُ وَإِمَّا فِدَآءً حَتَّىٰ تَضَعَ ٱلْحَرْبُ أَوْزَارَهَا ذَٰلِكَ وَلَوْ يَشَآءُ ٱللَّهُ لَٱنتَصَرَ مِنْهُمْ وَلَٰكِن لِّيَبْلُوَا۟ بَعْضَكُم بِبَعْضٍ وَٱلَّذِينَ قُتِلُوا۟ فِى سَبِيلِ ٱللَّهِ فَلَن يُضِلَّ أَعْمَٰلَهُمْ

Kannada Translation - Hamza Buturನೀವು ಸತ್ಯನಿಷೇಧಿಗಳೊಡನೆ (ಯುದ್ಧದಲ್ಲಿ) ಮುಖಾಮುಖಿಯಾದರೆ ಅವರ ಕತ್ತುಗಳ ಮೇಲೆ ಬೀಸಿರಿ. ಅವರನ್ನು ಚೆನ್ನಾಗಿ ಬಗ್ಗುಬಡಿದ ನಂತರ ಅವರನ್ನು ಬಿಗಿಯಾಗಿ ಬಂಧಿಸಿರಿ. ನಂತರ ಒಂದೋ ಅವರೊಡನೆ ದಾಕ್ಷಿಣ್ಯ ತೋರಿರಿ[1] ಅಥವಾ ವಿಮೋಚನಾ ಶುಲ್ಕವನ್ನು ಪಡೆದು ಅವರನ್ನು ಸ್ವತಂತ್ರಗೊಳಿಸಿರಿ—ಯುದ್ಧವು ಅದರ ಭಾರವನ್ನು ಕಳಚುವ ತನಕ.[2] ಇದೇ ನಿಯಮ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವನೇ ಅವರಿಂದ ಪ್ರತೀಕಾರ ಪಡೆಯುತ್ತಿದ್ದನು. ಆದರೆ ಇದು ನಿಮ್ಮಲ್ಲಿ ಕೆಲವರನ್ನು ಇತರ ಕೆಲವರ ಮೂಲಕ ಪರೀಕ್ಷಿಸುವುದಕ್ಕಾಗಿದೆ. ಯಾರು ಅಲ್ಲಾಹನ ಮಾರ್ಗದಲ್ಲಿ ಹತರಾಗುತ್ತಾರೋ ಅವರ ಕರ್ಮಗಳನ್ನು ಅವನು ಎಂದಿಗೂ ನಿಷ್ಫಲಗೊಳಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

سَيَهْدِيهِمْ وَيُصْلِحُ بَالَهُمْ

Kannada Translation - Hamza Buturಅವನು ಅವರಿಗೆ ದಾರಿ ತೋರಿಸುವನು ಮತ್ತು ಅವರ ಸ್ಥಿತಿಯನ್ನು ಸುಧಾರಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيُدْخِلُهُمُ ٱلْجَنَّةَ عَرَّفَهَا لَهُمْ

Kannada Translation - Hamza Buturಅವನು ಅವರಿಗೆ ಪರಿಚಯಿಸಿಕೊಟ್ಟ ಆ ಸ್ವರ್ಗಕ್ಕೆ ಅವನು ಅವರನ್ನು ಪ್ರವೇಶ ಮಾಡಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَٰٓأَيُّهَا ٱلَّذِينَ ءَامَنُوٓا۟ إِن تَنصُرُوا۟ ٱللَّهَ يَنصُرْكُمْ وَيُثَبِّتْ أَقْدَامَكُمْ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನಿಗೆ ಸಹಾಯ ಮಾಡಿದರೆ ಅವನು ನಿಮಗೆ ಸಹಾಯ ಮಾಡುತ್ತಾನೆ ಮತ್ತು ನಿಮ್ಮ ಪಾದಗಳನ್ನು ದೃಢವಾಗಿ ನಿಲ್ಲಿಸುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ كَفَرُوا۟ فَتَعْسًا لَّهُمْ وَأَضَلَّ أَعْمَٰلَهُمْ

Kannada Translation - Hamza Buturಸತ್ಯನಿಷೇಧಿಗಳು ಯಾರೋ ಅವರಿಗೆ ವಿನಾಶ ಕಾದಿದೆ. ಅಲ್ಲಾಹು ಅವರ ಕರ್ಮಗಳನ್ನು ವ್ಯರ್ಥಗೊಳಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ بِأَنَّهُمْ كَرِهُوا۟ مَآ أَنزَلَ ٱللَّهُ فَأَحْبَطَ أَعْمَٰلَهُمْ

Kannada Translation - Hamza Buturಅದೇಕೆಂದರೆ ಅಲ್ಲಾಹು ಅವತೀರ್ಣಗೊಳಿಸಿದ್ದನ್ನು ಅವರು ದ್ವೇಷಿಸಿದರು. ಆದ್ದರಿಂದ ಅವನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَلَمْ يَسِيرُوا۟ فِى ٱلْأَرْضِ فَيَنظُرُوا۟ كَيْفَ كَانَ عَٰقِبَةُ ٱلَّذِينَ مِن قَبْلِهِمْ دَمَّرَ ٱللَّهُ عَلَيْهِمْ وَلِلْكَٰفِرِينَ أَمْثَٰلُهَا

Kannada Translation - Hamza Buturಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅಲ್ಲಾಹು ಅವರನ್ನು ನಿರ್ನಾಮ ಮಾಡಿದನು. ಸತ್ಯನಿಷೇಧಿಗಳಿಗೆ ಅಂತಹುದೇ ಶಿಕ್ಷೆಯಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ بِأَنَّ ٱللَّهَ مَوْلَى ٱلَّذِينَ ءَامَنُوا۟ وَأَنَّ ٱلْكَٰفِرِينَ لَا مَوْلَىٰ لَهُمْ

Kannada Translation - Hamza Buturಅದೇಕೆಂದರೆ ಅಲ್ಲಾಹು ಸತ್ಯವಿಶ್ವಾಸಿಗಳ ರಕ್ಷಕನಾಗಿದ್ದಾನೆ ಮತ್ತು ಸತ್ಯನಿಷೇಧಿಗಳಿಗೆ ಯಾವುದೇ ರಕ್ಷಕರಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱللَّهَ يُدْخِلُ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ جَنَّٰتٍ تَجْرِى مِن تَحْتِهَا ٱلْأَنْهَٰرُ وَٱلَّذِينَ كَفَرُوا۟ يَتَمَتَّعُونَ وَيَأْكُلُونَ كَمَا تَأْكُلُ ٱلْأَنْعَٰمُ وَٱلنَّارُ مَثْوًى لَّهُمْ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಕರ್ಮವೆಸಗಿದವರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಸತ್ಯನಿಷೇಧಿಗಳು (ಇಹಲೋಕದಲ್ಲಿ) ಆನಂದಿಸುತ್ತಾರೆ ಮತ್ತು ಜಾನುವಾರುಗಳು ತಿನ್ನುವಂತೆ ತಿನ್ನುತ್ತಾರೆ. ನರಕವು ಅವರ ವಾಸಸ್ಥಳವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَكَأَيِّن مِّن قَرْيَةٍ هِىَ أَشَدُّ قُوَّةً مِّن قَرْيَتِكَ ٱلَّتِىٓ أَخْرَجَتْكَ أَهْلَكْنَٰهُمْ فَلَا نَاصِرَ لَهُمْ

Kannada Translation - Hamza Buturನಿಮ್ಮನ್ನು ಹೊರಹಾಕಿದ ಈ ಊರಿಗಿಂತಲೂ (ಮಕ್ಕಾ) ಬಲಿಷ್ಠವಾದ ಎಷ್ಟು ಊರುಗಳಿವೆ! ಅವರನ್ನು ನಾವು ನಾಶ ಮಾಡಿದೆವು. ಅವರಿಗೆ ಯಾವುದೇ ಸಹಾಯಕರು ಇರಲಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَمَن كَانَ عَلَىٰ بَيِّنَةٍ مِّن رَّبِّهِۦ كَمَن زُيِّنَ لَهُۥ سُوٓءُ عَمَلِهِۦ وَٱتَّبَعُوٓا۟ أَهْوَآءَهُم

Kannada Translation - Hamza Buturತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಸಾಕ್ಷ್ಯದ ಮೇಲೆ ನಿಂತಿರುವ ವ್ಯಕ್ತಿ ದುಷ್ಕರ್ಮಗಳನ್ನು ಆಕರ್ಷಕವಾಗಿ ತೋರಿಸಲಾದ ಮತ್ತು ಸ್ವೇಚ್ಛೆಗಳ ಹಿಂಬಾಲಕನಾದ ವ್ಯಕ್ತಿಯಂತಾಗುವನೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

مَّثَلُ ٱلْجَنَّةِ ٱلَّتِى وُعِدَ ٱلْمُتَّقُونَ فِيهَآ أَنْهَٰرٌ مِّن مَّآءٍ غَيْرِ ءَاسِنٍ وَأَنْهَٰرٌ مِّن لَّبَنٍ لَّمْ يَتَغَيَّرْ طَعْمُهُۥ وَأَنْهَٰرٌ مِّنْ خَمْرٍ لَّذَّةٍ لِّلشَّٰرِبِينَ وَأَنْهَٰرٌ مِّنْ عَسَلٍ مُّصَفًّى وَلَهُمْ فِيهَا مِن كُلِّ ٱلثَّمَرَٰتِ وَمَغْفِرَةٌ مِّن رَّبِّهِمْ كَمَنْ هُوَ خَٰلِدٌ فِى ٱلنَّارِ وَسُقُوا۟ مَآءً حَمِيمًا فَقَطَّعَ أَمْعَآءَهُمْ

Kannada Translation - Hamza Buturದೇವಭಯವುಳ್ಳವರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು ಹೇಗಿದೆಯೆಂದರೆ ಅದರಲ್ಲಿ ವಾಸನೆ ಬದಲಾಗದ ನೀರಿನ ಹೊಳೆಗಳಿವೆ, ರುಚಿ ಬದಲಾಗದ ಹಾಲಿನ ಹೊಳೆಗಳಿವೆ, ಕುಡಿಯುವವರಿಗೆ ಆಹ್ಲಾದಕರವಾದ ಶರಾಬಿನ ನದಿಗಳಿವೆ ಮತ್ತು ಶುದ್ಧವಾದ ಜೇನಿನ ನದಿಗಳಿವೆ. ಅಲ್ಲಿ ಅವರಿಗೆ ಎಲ್ಲಾ ತರಹದ ಹಣ್ಣು-ಹಂಪಲುಗಳಿವೆ. ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಕ್ಷಮೆಯೂ ಇದೆ. (ಇವರ ಸ್ಥಿತಿಯು) ನರಕದಲ್ಲಿ ಶಾಶ್ವತವಾಗಿ ವಾಸಿಸುವವನಂತೆಯೇ? ಅವರಿಗೆ ಕುಡಿಯಲು ನೀಡಲಾಗುವ ಕುದಿಯುವ ನೀರು ಅವರ ಕರುಳುಗಳನ್ನು ತುಂಡು ತುಂಡಾಗಿ ಕತ್ತರಿಸುತ್ತದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَمِنْهُم مَّن يَسْتَمِعُ إِلَيْكَ حَتَّىٰٓ إِذَا خَرَجُوا۟ مِنْ عِندِكَ قَالُوا۟ لِلَّذِينَ أُوتُوا۟ ٱلْعِلْمَ مَاذَا قَالَ ءَانِفًا أُو۟لَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمْ وَٱتَّبَعُوٓا۟ أَهْوَآءَهُمْ

Kannada Translation - Hamza Buturಅವರಲ್ಲಿ ಕೆಲವರು ನೀವು ಹೇಳುವುದನ್ನು ಕಿವಿಗೊಟ್ಟು ಕೇಳುತ್ತಾರೆ. ಎಲ್ಲಿಯವರೆಗೆಂದರೆ, ಅವರು ನಿಮ್ಮ ಬಳಿಯಿಂದ ಹೊರಟರೆ ಜ್ಞಾನಿಗಳೊಂದಿಗೆ (ಸಹಾಬಿಗಳೊಂದಿಗೆ) ಕೇಳುತ್ತಾರೆ: “ಅವರು ಈಗ ಹೇಳಿದ್ದೇನು?” ಅವರ ಹೃದಯಗಳ ಮೇಲೆ ಅಲ್ಲಾಹು ಮೊಹರು ಹಾಕಿದ್ದಾನೆ ಮತ್ತು ಅವರು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸುತ್ತಾರೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَٱلَّذِينَ ٱهْتَدَوْا۟ زَادَهُمْ هُدًى وَءَاتَىٰهُمْ تَقْوَىٰهُمْ

Kannada Translation - Hamza Buturಸನ್ಮಾರ್ಗ ಪಡೆದವರು ಯಾರೋ ಅವರಿಗೆ ಅಲ್ಲಾಹು ಇನ್ನೂ ಹೆಚ್ಚು ಸನ್ಮಾರ್ಗವನ್ನು ದಯಪಾಲಿಸುತ್ತಾನೆ ಮತ್ತು ಅವರಿಗೆ ಅವರ ದೇವಭಯವನ್ನು ನೀಡುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَهَلْ يَنظُرُونَ إِلَّا ٱلسَّاعَةَ أَن تَأْتِيَهُم بَغْتَةً فَقَدْ جَآءَ أَشْرَاطُهَا فَأَنَّىٰ لَهُمْ إِذَا جَآءَتْهُمْ ذِكْرَىٰهُمْ

Kannada Translation - Hamza Buturಅಂತ್ಯಸಮಯವು ಅವರ ಬಳಿಗೆ ಹಠಾತ್ತನೆ ಬರುವುದನ್ನಲ್ಲದೆ ಬೇರೆ ಏನನ್ನು ಅವರು ಕಾಯುತ್ತಿದ್ದಾರೆ? ಅದರ ಕೆಲವು ಚಿಹ್ನೆಗಳು ಈಗಾಗಲೇ ಬಂದಿವೆ. ನಂತರ ಅವರ ಬಳಿಗೆ ಅಂತ್ಯಸಮಯವು ಬಂದಾಗ ಅವರಿಗೆ ಉಪದೇಶವು ಪ್ರಯೋಜನಪಡುವುದಾದರೂ ಹೇಗೆ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَٱعْلَمْ أَنَّهُۥ لَآ إِلَٰهَ إِلَّا ٱللَّهُ وَٱسْتَغْفِرْ لِذَنۢبِكَ وَلِلْمُؤْمِنِينَ وَٱلْمُؤْمِنَٰتِ وَٱللَّهُ يَعْلَمُ مُتَقَلَّبَكُمْ وَمَثْوَىٰكُمْ

Kannada Translation - Hamza Buturತಿಳಿಯಿರಿ! ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ನಿಮ್ಮ ಪಾಪಕ್ಕೆ ಕ್ಷಮೆಯಾಚಿಸಿರಿ. ಸತ್ಯವಿಶ್ವಾಸಿ ಪುರುಷರಿಗೆ ಮತ್ತು ಸ್ತ್ರೀಯರಿಗೆ ಕ್ಷಮೆಯಾಚಿಸಿರಿ. ಅಲ್ಲಾಹು ನಿಮ್ಮ ಚಲನವಲನಗಳನ್ನು ಮತ್ತು ವಾಸಸ್ಥಳವನ್ನು ತಿಳಿದಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَيَقُولُ ٱلَّذِينَ ءَامَنُوا۟ لَوْلَا نُزِّلَتْ سُورَةٌ فَإِذَآ أُنزِلَتْ سُورَةٌ مُّحْكَمَةٌ وَذُكِرَ فِيهَا ٱلْقِتَالُ رَأَيْتَ ٱلَّذِينَ فِى قُلُوبِهِم مَّرَضٌ يَنظُرُونَ إِلَيْكَ نَظَرَ ٱلْمَغْشِىِّ عَلَيْهِ مِنَ ٱلْمَوْتِ فَأَوْلَىٰ لَهُمْ

Kannada Translation - Hamza Buturಸತ್ಯವಿಶ್ವಾಸಿಗಳು ಕೇಳುತ್ತಾರೆ: “ಒಂದು ಅಧ್ಯಾಯವು ಏಕೆ ಅವತೀರ್ಣವಾಗಿಲ್ಲ?” ಆದರೆ ಖಚಿತ ನಿಯಮಗಳಿರುವ ಒಂದು ಅಧ್ಯಾಯವು ಅವತೀರ್ಣವಾಗಿ ಅದರಲ್ಲಿ ಯುದ್ಧದ ಬಗ್ಗೆ ಉಲ್ಲೇಖಿಸಲಾದರೆ ಮೃತ್ಯು ಆವರಿಸಿ ಪ್ರಜ್ಞೆ ಕಳಕೊಂಡ ವ್ಯಕ್ತಿಯು ನೋಡುವಂತೆ, ಹೃದಯಗಳಲ್ಲಿ ರೋಗವಿರುವವರು ನಿಮ್ಮ ಕಡೆಗೆ ನೋಡುವುದನ್ನು ನೀವು ಕಾಣುವಿರಿ. ಅವರಿಗೆ ಅದು ಅತ್ಯಂತ ಅರ್ಹವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

طَاعَةٌ وَقَوْلٌ مَّعْرُوفٌ فَإِذَا عَزَمَ ٱلْأَمْرُ فَلَوْ صَدَقُوا۟ ٱللَّهَ لَكَانَ خَيْرًا لَّهُمْ

Kannada Translation - Hamza Buturಆಜ್ಞಾಪಾಲನೆ ಮಾಡುವುದು ಹಾಗೂ ಉತ್ತಮ ಮಾತನ್ನು ಹೇಳುವುದು. ನಂತರ ವಿಷಯವನ್ನು ತೀರ್ಮಾನಿಸಲಾದಾಗ ಅವರು ಅಲ್ಲಾಹನಿಗೆ ನಿಷ್ಠೆಯನ್ನು ತೋರಿಸಿದರೆ ಅದು ಅವರಿಗೆ ಶ್ರೇಷ್ಠವಾಗಿದೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَهَلْ عَسَيْتُمْ إِن تَوَلَّيْتُمْ أَن تُفْسِدُوا۟ فِى ٱلْأَرْضِ وَتُقَطِّعُوٓا۟ أَرْحَامَكُمْ

Kannada Translation - Hamza Buturನೀವು (ಯುದ್ಧದಿಂದ) ವಿಮುಖರಾದರೆ ಬಹುಶಃ ನೀವು ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಲೂ ಮತ್ತು ನಿಮ್ಮ ಕುಟುಂಬ ಸಂಬಂಧಗಳನ್ನು ಕಡಿಯುತ್ತಲೂ ಇರುವಿರಾ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أُو۟لَٰٓئِكَ ٱلَّذِينَ لَعَنَهُمُ ٱللَّهُ فَأَصَمَّهُمْ وَأَعْمَىٰٓ أَبْصَٰرَهُمْ

Kannada Translation - Hamza Buturಅಂತಹ ಜನರನ್ನು ಅಲ್ಲಾಹು ಶಪಿಸಿದ್ದಾನೆ, ಅವರನ್ನು ಕಿವುಡರನ್ನಾಗಿ ಮಾಡಿದ್ದಾನೆ ಮತ್ತು ಅವರನ್ನು ಕಣ್ಣು ಕಾಣದವರಂತೆ ಮಾಡಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَفَلَا يَتَدَبَّرُونَ ٱلْقُرْءَانَ أَمْ عَلَىٰ قُلُوبٍ أَقْفَالُهَآ

Kannada Translation - Hamza Buturಅವರು ಕುರ್‌ಆನನ್ನು ಮನನ ಮಾಡುವುದಿಲ್ಲವೇ? ಅಥವಾ (ಅವರ) ಹೃದಯಗಳಿಗೆ ಬೀಗ ಜಡಿಯಲಾಗಿದೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ ٱرْتَدُّوا۟ عَلَىٰٓ أَدْبَٰرِهِم مِّنۢ بَعْدِ مَا تَبَيَّنَ لَهُمُ ٱلْهُدَى ٱلشَّيْطَٰنُ سَوَّلَ لَهُمْ وَأَمْلَىٰ لَهُمْ

Kannada Translation - Hamza Buturನಿಶ್ಚಯವಾಗಿಯೂ ಸನ್ಮಾರ್ಗವು ಸ್ಪಷ್ಟವಾದ ಬಳಿಕ ಅದರಿಂದ ಮುಖ ತಿರುಗಿಸಿ ನಡೆದವರು ಯಾರೋ ಅವರಿಗೆ ಶೈತಾನನು (ಅವರ ಕೃತ್ಯಗಳನ್ನು) ಸುಂದರವಾಗಿ ತೋರಿಸಿದ್ದಾನೆ ಮತ್ತು ಅವರಿಗೆ (ವ್ಯರ್ಥ ನಿರೀಕ್ಷೆಗಳನ್ನು) ದೀರ್ಘಗೊಳಿಸಿಕೊಟ್ಟಿದ್ದಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ بِأَنَّهُمْ قَالُوا۟ لِلَّذِينَ كَرِهُوا۟ مَا نَزَّلَ ٱللَّهُ سَنُطِيعُكُمْ فِى بَعْضِ ٱلْأَمْرِ وَٱللَّهُ يَعْلَمُ إِسْرَارَهُمْ

Kannada Translation - Hamza Buturಅದೇಕೆಂದರೆ ಅವರು (ಕಪಟವಿಶ್ವಾಸಿಗಳು) ಅಲ್ಲಾಹು ಅವತೀರ್ಣಗೊಳಿಸಿದ್ದನ್ನು ದ್ವೇಷಿಸುವವರೊಡನೆ (ಯಹೂದಿಗಳೊಡನೆ) ಹೇಳಿದರು: “ಕೆಲವು ವಿಷಯಗಳಲ್ಲಿ ನಾವು ನಿಮ್ಮ ಮಾತನ್ನು ಕೇಳುತ್ತೇವೆ.” ಅವರು ರಹಸ್ಯವಾಗಿಡುವುದನ್ನು ಅಲ್ಲಾಹು ತಿಳಿಯುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَكَيْفَ إِذَا تَوَفَّتْهُمُ ٱلْمَلَٰٓئِكَةُ يَضْرِبُونَ وُجُوهَهُمْ وَأَدْبَٰرَهُمْ

Kannada Translation - Hamza Buturಹಾಗಾದರೆ ದೇವದೂತರು‍ಗಳು ಅವರ ಮುಖ ಮತ್ತು ಬೆನ್ನುಗಳಿಗೆ ಥಳಿಸುತ್ತಾ ಅವರನ್ನು ಆತ್ಮವನ್ನು ವಶಪಡಿಸುವಾಗ ಅವರ ಸ್ಥಿತಿ ಹೇಗಿರಬಹುದು?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

ذَٰلِكَ بِأَنَّهُمُ ٱتَّبَعُوا۟ مَآ أَسْخَطَ ٱللَّهَ وَكَرِهُوا۟ رِضْوَٰنَهُۥ فَأَحْبَطَ أَعْمَٰلَهُمْ

Kannada Translation - Hamza Buturಅದೇಕೆಂದರೆ ಅವರು ಅಲ್ಲಾಹನಿಗೆ ಕೋಪ ತರುವ ವಿಷಯಗಳನ್ನು ಅನುಸರಿಸಿದರು ಮತ್ತು ಅವನು ಇಷ್ಟಪಡುವುದನ್ನು ದ್ವೇಷಿಸಿದರು. ಆದ್ದರಿಂದ ಅವನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

أَمْ حَسِبَ ٱلَّذِينَ فِى قُلُوبِهِم مَّرَضٌ أَن لَّن يُخْرِجَ ٱللَّهُ أَضْغَٰنَهُمْ

Kannada Translation - Hamza Buturಹೃದಯಗಳಲ್ಲಿ ರೋಗವಿರುವವರು ಅಲ್ಲಾಹು ಅವರ ಆಂತರ್ಯದಲ್ಲಿರುವ ಹಗೆಯನ್ನು ಬಹಿರಂಗಪಡಿಸುವುದಿಲ್ಲವೆಂದು ಭಾವಿಸಿದ್ದಾರೆಯೇ?

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَوْ نَشَآءُ لَأَرَيْنَٰكَهُمْ فَلَعَرَفْتَهُم بِسِيمَٰهُمْ وَلَتَعْرِفَنَّهُمْ فِى لَحْنِ ٱلْقَوْلِ وَٱللَّهُ يَعْلَمُ أَعْمَٰلَكُمْ

Kannada Translation - Hamza Buturನಾವು ಇಚ್ಛಿಸಿದರೆ ಅವರನ್ನು ನಿಮಗೆ ತೋರಿಸುತ್ತಿದ್ದೆವು. ಆಗ ಅವರ ಲಕ್ಷಣಗಳಿಂದ ನೀವು ಅವರನ್ನು ಗುರುತಿಸುತ್ತಿದ್ದಿರಿ. ಅವರು ಮಾತನಾಡುವ ಶೈಲಿಯಿಂದಲೂ ನಿಮಗೆ ಖಂಡಿತ ಅವರನ್ನು ಗುರುತಿಸಬಹುದು. ಅಲ್ಲಾಹು ನಿಮ್ಮ ಎಲ್ಲಾ ಕರ್ಮಗಳನ್ನು ತಿಳಿಯುತ್ತಾನೆ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

وَلَنَبْلُوَنَّكُمْ حَتَّىٰ نَعْلَمَ ٱلْمُجَٰهِدِينَ مِنكُمْ وَٱلصَّٰبِرِينَ وَنَبْلُوَا۟ أَخْبَارَكُمْ

Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮನ್ನು ಪರೀಕ್ಷಿಸುವೆವು. ನಿಮ್ಮಲ್ಲಿರುವ ಹೋರಾಟಗಾರರು ಯಾರು ಮತ್ತು ಸಹಿಷ್ಣುತೆಯುಳ್ಳವರು ಯಾರು ಎಂದು ಗುರುತಿಸಿ ತಿಳಿಯುವ ತನಕ ಮತ್ತು ನಿಮ್ಮ ವಿಚಾರಗಳನ್ನು ಪರೀಕ್ಷಿಸಿ ತಿಳಿಯುವ ತನಕ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ وَشَآقُّوا۟ ٱلرَّسُولَ مِنۢ بَعْدِ مَا تَبَيَّنَ لَهُمُ ٱلْهُدَىٰ لَن يَضُرُّوا۟ ٱللَّهَ شَيْـًٔا وَسَيُحْبِطُ أَعْمَٰلَهُمْ

Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಮತ್ತು ಸನ್ಮಾರ್ಗವು ಸ್ಪಷ್ಟವಾದ ಬಳಿಕ ಸಂದೇಶವಾಹಕರಿಗೆ ವಿರುದ್ಧವಾಗಿ ಚಲಿಸಿದವರು ಯಾರೋ ಅವರು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡಲಾರರು. ಅಲ್ಲಾಹು ಅವರ ಕರ್ಮಗಳನ್ನು ಸದ್ಯವೇ ನಿಷ್ಫಲಗೊಳಿಸುವನು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

يَٰٓأَيُّهَا ٱلَّذِينَ ءَامَنُوٓا۟ أَطِيعُوا۟ ٱللَّهَ وَأَطِيعُوا۟ ٱلرَّسُولَ وَلَا تُبْطِلُوٓا۟ أَعْمَٰلَكُمْ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಆಜ್ಞೆಗಳನ್ನು ಅನುಸರಿಸಿರಿ ಮತ್ತು ಸಂದೇಶವಾಹಕರ ಆಜ್ಞೆಗಳನ್ನು ಅನುಸರಿಸಿರಿ. ನಿಮ್ಮ ಕರ್ಮಗಳನ್ನು ನಿಷ್ಫಲಗೊಳಿಸಬೇಡಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّ ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ ثُمَّ مَاتُوا۟ وَهُمْ كُفَّارٌ فَلَن يَغْفِرَ ٱللَّهُ لَهُمْ

Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಹಾಗೂ ನಂತರ ಸತ್ಯನಿಷೇಧಿಗಳಾಗಿಯೇ ಸಾವನ್ನಪ್ಪಿದವರು ಯಾರೋ ಅವರಿಗೆ ಅಲ್ಲಾಹು ಎಂದೂ ಕ್ಷಮಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

فَلَا تَهِنُوا۟ وَتَدْعُوٓا۟ إِلَى ٱلسَّلْمِ وَأَنتُمُ ٱلْأَعْلَوْنَ وَٱللَّهُ مَعَكُمْ وَلَن يَتِرَكُمْ أَعْمَٰلَكُمْ

Kannada Translation - Hamza Buturಆದ್ದರಿಂದ ನೀವು ಬಲಹೀನರಂತೆ ಶಾಂತಿ-ಸಂಧಾನಕ್ಕೆ ಮುಂದಾಗಬೇಡಿ. ವಾಸ್ತವವಾಗಿ ನೀವೇ ಶ್ರೇಷ್ಠರು. ಅಲ್ಲಾಹು ನಿಮ್ಮ ಜೊತೆಗಿದ್ದಾನೆ. ಅವನು ನಿಮ್ಮ ಕರ್ಮಗಳನ್ನು ಎಂದಿಗೂ ವ್ಯರ್ಥಗೊಳಿಸುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِنَّمَا ٱلْحَيَوٰةُ ٱلدُّنْيَا لَعِبٌ وَلَهْوٌ وَإِن تُؤْمِنُوا۟ وَتَتَّقُوا۟ يُؤْتِكُمْ أُجُورَكُمْ وَلَا يَسْـَٔلْكُمْ أَمْوَٰلَكُمْ

Kannada Translation - Hamza Buturನಿಶ್ಚಯವಾಗಿಯೂ ಇಹಲೋಕ ಜೀವನವು ಆಟ ಮತ್ತು ಮನೋರಂಜನೆಯಾಗಿದೆ. ನೀವು ವಿಶ್ವಾಸವಿಟ್ಟು ದೇವಭಯದಿಂದ ಜೀವಿಸುವುದಾದರೆ ಅವನು ನಿಮ್ಮ ಪ್ರತಿಫಲವನ್ನು ನಿಮಗೆ ಕೊಡುವನು. ಅವನು ನಿಮ್ಮಿಂದ ನಿಮ್ಮ ಆಸ್ತಿಯನ್ನು ಕೇಳುವುದಿಲ್ಲ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

إِن يَسْـَٔلْكُمُوهَا فَيُحْفِكُمْ تَبْخَلُوا۟ وَيُخْرِجْ أَضْغَٰنَكُمْ

Kannada Translation - Hamza Buturಅವನೇನಾದರೂ ನಿಮ್ಮಿಂದ ನಿಮ್ಮ ಸಂಪತ್ತನ್ನು ಕೇಳಿದರೆ ಮತ್ತು ಒತ್ತಾಯಪಡಿಸಿದರೆ, ನೀವು ಜಿಪುಣತನ ತೋರುತ್ತೀರಿ ಮತ್ತು ನಿಮ್ಮ ಆಂತರ್ಯದಲ್ಲಿರುವ ಹಗೆಯನ್ನು ಹೊರಹಾಕುತ್ತೀರಿ.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

هَٰٓأَنتُمْ هَٰٓؤُلَآءِ تُدْعَوْنَ لِتُنفِقُوا۟ فِى سَبِيلِ ٱللَّهِ فَمِنكُم مَّن يَبْخَلُ وَمَن يَبْخَلْ فَإِنَّمَا يَبْخَلُ عَن نَّفْسِهِۦ وَٱللَّهُ ٱلْغَنِىُّ وَأَنتُمُ ٱلْفُقَرَآءُ وَإِن تَتَوَلَّوْا۟ يَسْتَبْدِلْ قَوْمًا غَيْرَكُمْ ثُمَّ لَا يَكُونُوٓا۟ أَمْثَٰلَكُم

Kannada Translation - Hamza Buturತಿಳಿಯಿರಿ! ನಿಮ್ಮನ್ನು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಲು ಕರೆಯಲಾಗುತ್ತದೆ. ಆಗ ನಿಮ್ಮಲ್ಲಿ ಕೆಲವರು ಜಿಪುಣತನ ತೋರುತ್ತಾರೆ. ಯಾರಾದರೂ ಜಿಪುಣತನ ತೋರಿದರೆ ಅವನು ಜಿಪುಣತನ ತೋರುವುದು ಸ್ವಯಂ ಅವನ ವಿರುದ್ಧವೇ ಆಗಿದೆ. ಅಲ್ಲಾಹನಿಗೆ ಯಾರ ಅಗತ್ಯವೂ ಇಲ್ಲ. ಆದರೆ ನಿಮಗೆ ಅಲ್ಲಾಹನ ಅಗತ್ಯವಿದೆ. ನೀವೇನಾದರೂ ತಿರುಗಿ ನಡೆದರೆ ಅವನು ನಿಮಗೆ ಬದಲಿಯಾಗಿ ನಿಮ್ಮ ಹೊರತಾದ ಬೇರೆ ಜನರನ್ನು ತರುವನು. ನಂತರ ಅವರು ನಿಮ್ಮಂತೆ ಆಗಿರಲಾರರು.

ಈ ಆಯತ್‌ನ ಎಲ್ಲಾ ಅನುವಾದಗಳನ್ನು ನೋಡಿ →

Looking for a topic? Try the meaning search — your question is scanned across all 6,236 verses.
ಭಾಷೆ — 70