مَّثَلُ ٱلْجَنَّةِ ٱلَّتِى وُعِدَ ٱلْمُتَّقُونَ فِيهَآ أَنْهَٰرٌ مِّن مَّآءٍ غَيْرِ ءَاسِنٍ وَأَنْهَٰرٌ مِّن لَّبَنٍ لَّمْ يَتَغَيَّرْ طَعْمُهُۥ وَأَنْهَٰرٌ مِّنْ خَمْرٍ لَّذَّةٍ لِّلشَّٰرِبِينَ وَأَنْهَٰرٌ مِّنْ عَسَلٍ مُّصَفًّى وَلَهُمْ فِيهَا مِن كُلِّ ٱلثَّمَرَٰتِ وَمَغْفِرَةٌ مِّن رَّبِّهِمْ كَمَنْ هُوَ خَٰلِدٌ فِى ٱلنَّارِ وَسُقُوا۟ مَآءً حَمِيمًا فَقَطَّعَ أَمْعَآءَهُمْ
Kannada Translation - Hamza Buturದೇವಭಯವುಳ್ಳವರಿಗೆ ವಾಗ್ದಾನ ಮಾಡಲಾಗಿರುವ ಸ್ವರ್ಗವು ಹೇಗಿದೆಯೆಂದರೆ ಅದರಲ್ಲಿ ವಾಸನೆ ಬದಲಾಗದ ನೀರಿನ ಹೊಳೆಗಳಿವೆ, ರುಚಿ ಬದಲಾಗದ ಹಾಲಿನ ಹೊಳೆಗಳಿವೆ, ಕುಡಿಯುವವರಿಗೆ ಆಹ್ಲಾದಕರವಾದ ಶರಾಬಿನ ನದಿಗಳಿವೆ ಮತ್ತು ಶುದ್ಧವಾದ ಜೇನಿನ ನದಿಗಳಿವೆ. ಅಲ್ಲಿ ಅವರಿಗೆ ಎಲ್ಲಾ ತರಹದ ಹಣ್ಣು-ಹಂಪಲುಗಳಿವೆ. ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಕ್ಷಮೆಯೂ ಇದೆ. (ಇವರ ಸ್ಥಿತಿಯು) ನರಕದಲ್ಲಿ ಶಾಶ್ವತವಾಗಿ ವಾಸಿಸುವವನಂತೆಯೇ? ಅವರಿಗೆ ಕುಡಿಯಲು ನೀಡಲಾಗುವ ಕುದಿಯುವ ನೀರು ಅವರ ಕರುಳುಗಳನ್ನು ತುಂಡು ತುಂಡಾಗಿ ಕತ್ತರಿಸುತ್ತದೆ.