يَٰٓأَيُّهَا ٱلَّذِينَ ءَامَنُوا۟ لَا تُحِلُّوا۟ شَعَٰٓئِرَ ٱللَّهِ وَلَا ٱلشَّهْرَ ٱلْحَرَامَ وَلَا ٱلْهَدْىَ وَلَا ٱلْقَلَٰٓئِدَ وَلَآ ءَآمِّينَ ٱلْبَيْتَ ٱلْحَرَامَ يَبْتَغُونَ فَضْلًا مِّن رَّبِّهِمْ وَرِضْوَٰنًا وَإِذَا حَلَلْتُمْ فَٱصْطَادُوا۟ وَلَا يَجْرِمَنَّكُمْ شَنَـَٔانُ قَوْمٍ أَن صَدُّوكُمْ عَنِ ٱلْمَسْجِدِ ٱلْحَرَامِ أَن تَعْتَدُوا۟ وَتَعَاوَنُوا۟ عَلَى ٱلْبِرِّ وَٱلتَّقْوَىٰ وَلَا تَعَاوَنُوا۟ عَلَى ٱلْإِثْمِ وَٱلْعُدْوَٰنِ وَٱتَّقُوا۟ ٱللَّهَ إِنَّ ٱللَّهَ شَدِيدُ ٱلْعِقَابِ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಲಾಂಛನಗಳಿಗೆ ಅಗೌರವ ತೋರಬೇಡಿ. ಪವಿತ್ರ ತಿಂಗಳಿಗೆ, ಬಲಿಮೃಗಗಳಿಗೆ, (ಅವುಗಳ ಕೊರಳಲ್ಲಿರುವ) ಪದಕಗಳಿಗೆ, ಮತ್ತು ತಮ್ಮ ಪರಿಪಾಲಕನ (ಅಲ್ಲಾಹನ) ಔದಾರ್ಯ ಹಾಗೂ ಸಂಪ್ರೀತಿಯನ್ನು ಹುಡುಕುತ್ತಾ ಪವಿತ್ರ ಭವನಕ್ಕೆ ತೀರ್ಥಯಾತ್ರೆ ಮಾಡುವವರಿಗೆ (ಅಗೌರವ ತೋರಬೇಡಿ). ನೀವು ಇಹ್ರಾಮ್ನಿಂದ ಮುಕ್ತರಾದರೆ ಬೇಟೆಯಾಡಿರಿ. ಮಸ್ಜಿದುಲ್ ಹರಾಮ್ನಿಂದ ನಿಮ್ಮನ್ನು ತಡೆದರು ಎಂಬ ಕಾರಣದಿಂದ ಕೆಲವು ಜನರೊಡನೆ ನಿಮಗಿರುವ ದ್ವೇಷವು ಅತಿರೇಕವೆಸಗುವಂತೆ ನಿಮ್ಮನ್ನು ಪ್ರೇರೇಪಿಸದಿರಲಿ. ಒಳಿತು ಮತ್ತು ದೇವಭಯದಲ್ಲಿ ಪರಸ್ಪರ ಸಹಕರಿಸಿರಿ. ಪಾಪ ಮತ್ತು ಅತಿರೇಕದಲ್ಲಿ ಪರಸ್ಪರ ಸಹಕರಿಸಬೇಡಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.