يَٰٓأَيُّهَا ٱلرَّسُولُ لَا يَحْزُنكَ ٱلَّذِينَ يُسَٰرِعُونَ فِى ٱلْكُفْرِ مِنَ ٱلَّذِينَ قَالُوٓا۟ ءَامَنَّا بِأَفْوَٰهِهِمْ وَلَمْ تُؤْمِن قُلُوبُهُمْ وَمِنَ ٱلَّذِينَ هَادُوا۟ سَمَّٰعُونَ لِلْكَذِبِ سَمَّٰعُونَ لِقَوْمٍ ءَاخَرِينَ لَمْ يَأْتُوكَ يُحَرِّفُونَ ٱلْكَلِمَ مِنۢ بَعْدِ مَوَاضِعِهِۦ يَقُولُونَ إِنْ أُوتِيتُمْ هَٰذَا فَخُذُوهُ وَإِن لَّمْ تُؤْتَوْهُ فَٱحْذَرُوا۟ وَمَن يُرِدِ ٱللَّهُ فِتْنَتَهُۥ فَلَن تَمْلِكَ لَهُۥ مِنَ ٱللَّهِ شَيْـًٔا أُو۟لَٰٓئِكَ ٱلَّذِينَ لَمْ يُرِدِ ٱللَّهُ أَن يُطَهِّرَ قُلُوبَهُمْ لَهُمْ فِى ٱلدُّنْيَا خِزْىٌ وَلَهُمْ فِى ٱلْـَٔاخِرَةِ عَذَابٌ عَظِيمٌ
Kannada Translation - Hamza Buturಓ ಸಂದೇಶವಾಹಕರೇ! ನಾವು ಸತ್ಯವಿಶ್ವಾಸಿಗಳೆಂದು ಬಾಯಿಂದ ಹೇಳುವವರು—ಆದರೆ ಹೃದಯಗಳಲ್ಲಿ ವಿಶ್ವಾಸವಿಲ್ಲದವರು (ಕಪಟವಿಶ್ವಾಸಿಗಳು) ಮತ್ತು ಸುಳ್ಳನ್ನು ಕಿವಿಗೊಟ್ಟು ಕೇಳುವ, ನಿಮ್ಮ ಬಳಿಗೆ ಬರದ ಜನರ ಮಾತುಗಳನ್ನು ಕಿವಿಗೊಟ್ಟು ಕೇಳುವ, ವಚನಗಳನ್ನು ಅದರ ಸ್ಥಾನದಿಂದ ವಿರೂಪಗೊಳಿಸುವ ಮತ್ತು ನಿಮಗೆ ಪ್ರವಾದಿಯ ಬಳಿ ಇದೇ ತೀರ್ಪು ಸಿಕ್ಕಿದರೆ ಸ್ವೀಕರಿಸಿರಿ, ಇಲ್ಲದಿದ್ದರೆ ಜಾಗರೂಕರಾಗಿರಿ ಎಂದು ಹೇಳುವ ಯಹೂದಿಗಳು ಸತ್ಯನಿಷೇಧದಲ್ಲಿ ತ್ವರೆ ಮಾಡುವುದನ್ನು ಕಂಡು ನೀವು ಬೇಸರಪಡಬೇಡಿ. ಅಲ್ಲಾಹು ಯಾರನ್ನು ನಾಶ ಮಾಡಲು ಬಯಸುತ್ತಾನೋ—ಅವನನ್ನು ಅಲ್ಲಾಹನಿಂದ ರಕ್ಷಿಸಲು ನಿಮಗೆ ಸಾಧ್ಯವಿಲ್ಲ. ಅಲ್ಲಾಹು ಅವರ ಹೃದಯಗಳನ್ನು ಶುದ್ಧೀಕರಿಸಲು ಬಯಸುವುದಿಲ್ಲ. ಅವರಿಗೆ ಇಹಲೋಕದಲ್ಲಿ ಅವಮಾನವಿದೆ ಮತ್ತು ಪರಲೋಕದಲ್ಲಿ ಕಠೋರ ಶಿಕ್ಷೆಯಿದೆ.