قُلْ يَٰٓأَهْلَ ٱلْكِتَٰبِ لَسْتُمْ عَلَىٰ شَىْءٍ حَتَّىٰ تُقِيمُوا۟ ٱلتَّوْرَىٰةَ وَٱلْإِنجِيلَ وَمَآ أُنزِلَ إِلَيْكُم مِّن رَّبِّكُمْ وَلَيَزِيدَنَّ كَثِيرًا مِّنْهُم مَّآ أُنزِلَ إِلَيْكَ مِن رَّبِّكَ طُغْيَٰنًا وَكُفْرًا فَلَا تَأْسَ عَلَى ٱلْقَوْمِ ٱلْكَٰفِرِينَ
Kannada Translation - Hamza Buturಹೇಳಿರಿ: “ಓ ಗ್ರಂಥದವರೇ! ನೀವು ತೌರಾತ್, ಇಂಜೀಲ್ ಮತ್ತು ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶಗಳನ್ನು ಸರಿಯಾಗಿ ಸಂಸ್ಥಾಪಿಸುವ ತನಕ ನಿಮಗೆ ಯಾವುದೇ ಅಸ್ತಿತ್ವವಿಲ್ಲ.” (ಪ್ರವಾದಿಯವರೇ) ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಅವರಲ್ಲಿ ಹೆಚ್ಚಿನವರಿಗೆ ಅತಿರೇಕ ಮತ್ತು ಸತ್ಯನಿಷೇಧವನ್ನು ಹೆಚ್ಚಿಸುತ್ತಿದೆ. ಆದ್ದರಿಂದ ಆ ಸತ್ಯನಿಷೇಧಿಗಳ ಬಗ್ಗೆ ನೀವು ದುಃಖಿಸಬೇಡಿ.