وَيَوْمَ يَحْشُرُهُمْ جَمِيعًا يَٰمَعْشَرَ ٱلْجِنِّ قَدِ ٱسْتَكْثَرْتُم مِّنَ ٱلْإِنسِ وَقَالَ أَوْلِيَآؤُهُم مِّنَ ٱلْإِنسِ رَبَّنَا ٱسْتَمْتَعَ بَعْضُنَا بِبَعْضٍ وَبَلَغْنَآ أَجَلَنَا ٱلَّذِىٓ أَجَّلْتَ لَنَا قَالَ ٱلنَّارُ مَثْوَىٰكُمْ خَٰلِدِينَ فِيهَآ إِلَّا مَا شَآءَ ٱللَّهُ إِنَّ رَبَّكَ حَكِيمٌ عَلِيمٌ
Kannada Translation - Hamza Buturಅವನು ಅವರೆಲ್ಲರನ್ನೂ ಒಟ್ಟುಗೂಡಿಸುವ ದಿನ. (ಅವನು ಹೇಳುವನು): “ಓ ಜಿನ್ನ್ಗಳೇ! ನೀವು ಮನುಷ್ಯರಲ್ಲಿ ಬಹುಸಂಖ್ಯಾತರನ್ನು ದಾರಿ ತಪ್ಪಿಸಿದ್ದೀರಿ.” ಮನುಷ್ಯರಲ್ಲಿ ಸೇರಿದ ಅವರ ಆಪ್ತಮಿತ್ರರು ಹೇಳುವರು: “ಓ ನಮ್ಮ ಪರಿಪಾಲಕನೇ! ನಮ್ಮಲ್ಲಿ ಕೆಲವರು ಇತರ ಕೆಲವರಿಂದ ಪ್ರಯೋಜನ ಪಡೆದರು. ಹೀಗೆ ನೀನು ನಮಗೆ ನಿಶ್ಚಯಿಸಿದ ಜೀವಿತಾವಧಿಯನ್ನು ನಾವು ತಲುಪಿದೆವು.” ಅಲ್ಲಾಹು ಹೇಳುವನು: “ನರಕಾಗ್ನಿಯೇ ನಿಮ್ಮ ವಾಸಸ್ಥಳ! ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ.”