وَمَا قَدَرُوا۟ ٱللَّهَ حَقَّ قَدْرِهِۦٓ إِذْ قَالُوا۟ مَآ أَنزَلَ ٱللَّهُ عَلَىٰ بَشَرٍ مِّن شَىْءٍ قُلْ مَنْ أَنزَلَ ٱلْكِتَٰبَ ٱلَّذِى جَآءَ بِهِۦ مُوسَىٰ نُورًا وَهُدًى لِّلنَّاسِ تَجْعَلُونَهُۥ قَرَاطِيسَ تُبْدُونَهَا وَتُخْفُونَ كَثِيرًا وَعُلِّمْتُم مَّا لَمْ تَعْلَمُوٓا۟ أَنتُمْ وَلَآ ءَابَآؤُكُمْ قُلِ ٱللَّهُ ثُمَّ ذَرْهُمْ فِى خَوْضِهِمْ يَلْعَبُونَ
Kannada Translation - Hamza Butur“ಅಲ್ಲಾಹು ಮನುಷ್ಯನಿಗೆ (ಪ್ರವಾದಿಗೆ) ಏನೂ ಅವತೀರ್ಣಗೊಳಿಸಿಲ್ಲ” ಎಂದು ಅವರು ಹೇಳಿದಾಗ, ಅವರು ಅಲ್ಲಾಹನಿಗೆ ಮಹತ್ವ ನೀಡಬೇಕಾದ ರೀತಿಯಲ್ಲಿ ಮಹತ್ವ ನೀಡಲಿಲ್ಲ. ಕೇಳಿರಿ: “ಜನರಿಗೆ ಬೆಳಕು ಮತ್ತು ಸನ್ಮಾರ್ಗವಾಗಿ ಮೂಸಾ ತಂದ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಯಾರು? ನೀವು ಅದನ್ನು ಕಾಗದದ ತುಂಡುಗಳಾಗಿ ಮಾಡಿ, ಅದರ ಕೆಲವು ಭಾಗವನ್ನು ಬಹಿರಂಗಪಡಿಸುತ್ತೀರಿ ಮತ್ತು ಹೆಚ್ಚಿನದ್ದನ್ನು ಮುಚ್ಚಿಡುತ್ತೀರಿ. ನಿಮಗೆ ಮತ್ತು ನಿಮ್ಮ ಪೂರ್ವಜರಿಗೆ ಗೊತ್ತಿಲ್ಲದ ಅನೇಕ ಸಂಗತಿಗಳನ್ನು (ಆ ಗ್ರಂಥದ ಮೂಲಕ) ಕಲಿಸಿಕೊಡಲಾಗಿತ್ತು.” ಹೇಳಿರಿ: “(ಅದನ್ನು ಅವತೀರ್ಣಗೊಳಿಸಿದ್ದು) ಅಲ್ಲಾಹು.” ನಂತರ ಅವರನ್ನು ಅವರ ವ್ಯರ್ಥ ಮಾತುಗಳಲ್ಲಿ ಆಟವಾಡಲು ಬಿಟ್ಟುಬಿಡಿ.