Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಸಾಮ್ರಾಟನು, ಪರಮ ಪವಿತ್ರನು, ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Kannada Translation - Hamza Buturಅವನೇ ಅನಕ್ಷರಸ್ಥ ಜನರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರನ್ನು ಕಳುಹಿಸಿದವನು. ಆ ಸಂದೇಶವಾಹಕರು ಅವರಿಗೆ ಅಲ್ಲಾಹನ ವಚನಗಳನ್ನು ಓದಿಕೊಡುತ್ತಾರೆ, ಅವರನ್ನು ಶುದ್ಧೀಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ವಿವೇಕವನ್ನು ಕಲಿಸಿಕೊಡುತ್ತಾರೆ. ಇದಕ್ಕಿಂತ ಮೊದಲು ಅವರು ಸ್ಪಷ್ಟ ದುರ್ಮಾರ್ಗದಲ್ಲಿದ್ದರು.
Kannada Translation - Hamza Buturತೌರಾತ್ನಲ್ಲಿರುವಂತೆ ನಡೆದುಕೊಳ್ಳಲು ಆದೇಶಿಸಲಾಗಿಯೂ ಸಹ ಅದರಂತೆ ನಡೆದುಕೊಳ್ಳದವರು ಯಾರೋ ಅವರ ಉದಾಹರಣೆಯು ಗ್ರಂಥಗಳನ್ನು ಹೊರುವ ಕತ್ತೆಯಂತೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವ ಜನರ ಉದಾಹರಣೆಯು ಬಹಳ ನಿಕೃಷ್ಟವಾಗಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
Kannada Translation - Hamza Buturಹೇಳಿರಿ: “ಓ ಯಹೂದಿಗಳೇ! ಇತರ ಜನರ ಹೊರತಾಗಿ ನೀವು ಮಾತ್ರ ಅಲ್ಲಾಹನ ಮಿತ್ರರು ಎಂಬ ನಿಮ್ಮ ದಾವೆಯು ಸತ್ಯವಾಗಿದ್ದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.”
Kannada Translation - Hamza Buturಆದರೆ ಅವರ ಕೈಗಳು ಈಗಾಗಲೇ ಮಾಡಿಟ್ಟಿರುವ ದುಷ್ಕರ್ಮಗಳಿಂದಾಗಿ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.
Kannada Translation - Hamza Buturಹೇಳಿರಿ: “ಯಾವ ಸಾವನ್ನು ಹೆದರಿ ನೀವು ಓಡಿ ಹೋಗುತ್ತಿದ್ದೀರೋ ಅದು ನಿಮ್ಮನ್ನು ಖಂಡಿತ ಭೇಟಿಯಾಗಲಿದೆ. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದ ಅಲ್ಲಾಹನ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು.”
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಶುಕ್ರವಾರ ನಮಾಝ್ಗಾಗಿ ಕರೆಯಲಾದರೆ (ಅಝಾನ್ ನೀಡಲಾದರೆ) ಅಲ್ಲಾಹನ ಸ್ಮರಣೆಯ ಕಡೆಗೆ ಧಾವಿಸಿರಿ ಮತ್ತು ವ್ಯಾಪಾರ-ವ್ಯವಹಾರಗಳನ್ನು ಬಿಟ್ಟುಬಿಡಿ. ಅದು ನಿಮಗೆ ಅತ್ಯುತ್ತಮವಾಗಿದೆ. ನೀವು ತಿಳಿದವರಾಗಿದ್ದರೆ.
Kannada Translation - Hamza Buturನಮಾಝ್ ಮುಗಿದ ನಂತರ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಔದಾರ್ಯವನ್ನು ಹುಡುಕಿರಿ. ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.
Kannada Translation - Hamza Buturಅವರು ವ್ಯಾಪಾರದ ಸರಕು ಮಾರಾಟವಾಗುವುದನ್ನು ಕಂಡರೆ ಅಥವಾ ಮನೋರಂಜನೆಯನ್ನು ಕಂಡರೆ ಅದರ ಕಡೆಗೆ ಓಡುತ್ತಾರೆ ಮತ್ತು ನಿಮ್ಮನ್ನು ನಿಂತ ಸ್ಥಿತಿಯಲ್ಲೇ ಬಿಟ್ಟುಬಿಡುತ್ತಾರೆ.[1] ಹೇಳಿರಿ: “ಅಲ್ಲಾಹನ ಬಳಿ ಏನಿದೆಯೋ ಅದು ವ್ಯಾಪಾರ ಮತ್ತು ಮನೋರಂಜನೆಗಿಂತಲೂ ಶ್ರೇಷ್ಠವಾಗಿದೆ. ಅಲ್ಲಾಹು ಉಪಜೀವನ ನೀಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ.”