فَإِذَا بَلَغْنَ أَجَلَهُنَّ فَأَمْسِكُوهُنَّ بِمَعْرُوفٍ أَوْ فَارِقُوهُنَّ بِمَعْرُوفٍ وَأَشْهِدُوا۟ ذَوَىْ عَدْلٍ مِّنكُمْ وَأَقِيمُوا۟ ٱلشَّهَٰدَةَ لِلَّهِ ذَٰلِكُمْ يُوعَظُ بِهِۦ مَن كَانَ يُؤْمِنُ بِٱللَّهِ وَٱلْيَوْمِ ٱلْـَٔاخِرِ وَمَن يَتَّقِ ٱللَّهَ يَجْعَل لَّهُۥ مَخْرَجًا
Kannada Translation - Hamza Buturಅವರು (ವಿಚ್ಛೇದಿತೆಯರು) ತಮ್ಮ ಇದ್ದತ್ನ ಅವಧಿಯನ್ನು ಪೂರ್ತಿ ಮಾಡುವ ಹಂತಕ್ಕೆ ತಲುಪಿದರೆ ಸ್ವೀಕಾರಾರ್ಹ ರೀತಿಯಲ್ಲಿ ಅವರನ್ನು ನಿಮ್ಮ ಬಳಿ (ಪತ್ನಿಯಾಗಿ) ಇರಿಸಿಕೊಳ್ಳಿರಿ ಅಥವಾ ಸ್ವೀಕಾರಾರ್ಹ ರೀತಿಯಲ್ಲಿ ಬಿಡುಗಡೆ ಮಾಡಿರಿ. ನಿಮ್ಮಲ್ಲಿನ ಇಬ್ಬರು ನ್ಯಾಯವಂತರನ್ನು ಸಾಕ್ಷಿ ನಿಲ್ಲಿಸಿರಿ. ಅಲ್ಲಾಹನ ಸಂಪ್ರೀತಿಗಾಗಿ ಸರಿಯಾದ ರೀತಿಯಲ್ಲಿ ಸಾಕ್ಷಿ ಹೇಳಿರಿ. ಇದು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರಿಗೆ ನೀಡಲಾಗುವ ಉಪದೇಶವಾಗಿದೆ. ಯಾರು ಅಲ್ಲಾಹನನ್ನು ಭಯಪಡುತ್ತಾನೋ ಅವನಿಗೆ ಅಲ್ಲಾಹು ನಿರ್ಗಮನ ದ್ವಾರವನ್ನು ಮಾಡಿಕೊಡುತ್ತಾನೆ.