يَٰٓأَيُّهَا ٱلَّذِينَ ءَامَنُوا۟ تُوبُوٓا۟ إِلَى ٱللَّهِ تَوْبَةً نَّصُوحًا عَسَىٰ رَبُّكُمْ أَن يُكَفِّرَ عَنكُمْ سَيِّـَٔاتِكُمْ وَيُدْخِلَكُمْ جَنَّٰتٍ تَجْرِى مِن تَحْتِهَا ٱلْأَنْهَٰرُ يَوْمَ لَا يُخْزِى ٱللَّهُ ٱلنَّبِىَّ وَٱلَّذِينَ ءَامَنُوا۟ مَعَهُۥ نُورُهُمْ يَسْعَىٰ بَيْنَ أَيْدِيهِمْ وَبِأَيْمَٰنِهِمْ يَقُولُونَ رَبَّنَآ أَتْمِمْ لَنَا نُورَنَا وَٱغْفِرْ لَنَآ إِنَّكَ عَلَىٰ كُلِّ شَىْءٍ قَدِيرٌ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನ ಮುಂದೆ ನಿಷ್ಕಳಂಕವಾಗಿ ಪಶ್ಚಾತ್ತಾಪಪಡಿರಿ. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮ್ಮ ಪಾಪಗಳನ್ನು ಅಳಿಸಿಬಿಡಬಹುದು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ನಿಮ್ಮನ್ನು ಪ್ರವೇಶ ಮಾಡಿಸಬಹುದು. ಅದು ಅಲ್ಲಾಹು ಪ್ರವಾದಿಯನ್ನು ಮತ್ತು ಅವರ ಜೊತೆಯಲ್ಲಿರುವ ಸತ್ಯವಿಶ್ವಾಸಿಗಳನ್ನು ಅವಮಾನಿಸದ ದಿನ. ಅವರ ಬೆಳಕು ಅವರ ಮುಂಭಾಗದಿಂದ ಮತ್ತು ಬಲಭಾಗದಿಂದ ಹರಿಯುತ್ತಿರುವುದು. ಅವರು ಹೇಳುವರು: “ನಮ್ಮ ಪರಿಪಾಲಕನೇ! ನಮ್ಮ ಬೆಳಕನ್ನು ನಮಗೆ ಪೂರ್ಣವಾಗಿ ನೀಡು. ನಮ್ಮನ್ನು ಕ್ಷಮಿಸು. ನಿಶ್ಚಯವಾಗಿಯೂ ನಿನಗೆ ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವಿದೆ.”