وَلَمَّا جَآءَ مُوسَىٰ لِمِيقَٰتِنَا وَكَلَّمَهُۥ رَبُّهُۥ قَالَ رَبِّ أَرِنِىٓ أَنظُرْ إِلَيْكَ قَالَ لَن تَرَىٰنِى وَلَٰكِنِ ٱنظُرْ إِلَى ٱلْجَبَلِ فَإِنِ ٱسْتَقَرَّ مَكَانَهُۥ فَسَوْفَ تَرَىٰنِى فَلَمَّا تَجَلَّىٰ رَبُّهُۥ لِلْجَبَلِ جَعَلَهُۥ دَكًّا وَخَرَّ مُوسَىٰ صَعِقًا فَلَمَّآ أَفَاقَ قَالَ سُبْحَٰنَكَ تُبْتُ إِلَيْكَ وَأَنَا۠ أَوَّلُ ٱلْمُؤْمِنِينَ
Kannada Translation - Hamza Buturನಮ್ಮ ನಿಶ್ಚಿತ ಸಮಯಕ್ಕೆ ಮೂಸಾ ಬಂದಾಗ ಮತ್ತು ಅವರ ಪರಿಪಾಲಕನು (ಅಲ್ಲಾಹು) ಅವರೊಡನೆ ಮಾತನಾಡಿದಾಗ ಅವರು ಹೇಳಿದರು: “ಓ ನನ್ನ ಪರಿಪಾಲಕನೇ! ನಿನ್ನನ್ನು ನನಗೆ ತೋರಿಸಿಕೊಡು. ನಾನು ನಿನ್ನನ್ನು ನೋಡಬೇಕು.” ಅಲ್ಲಾಹು ಹೇಳಿದನು: “ನಿಮಗೆ ನನ್ನನ್ನು ನೋಡಲು ಸಾಧ್ಯವಿಲ್ಲ. ಬದಲಿಗೆ, ನೀವು ಆ ಬೆಟ್ಟವನ್ನು ನೋಡಿರಿ. ಅದು ಅದರ ಸ್ಥಳದಲ್ಲಿಯೇ ಕದಲದೆ ನಿಂತರೆ ನೀವು ನನ್ನನ್ನು ನೋಡುವಿರಿ.” ನಂತರ ಅವರ ಪರಿಪಾಲಕನು (ಅಲ್ಲಾಹು) ಆ ಬೆಟ್ಟಕ್ಕೆ ತನ್ನನ್ನು ಪ್ರಕಟಗೊಳಿಸಿದಾಗ, ಅವನ ತೇಜಸ್ಸು ಅದನ್ನು ನುಚ್ಚುನೂರು ಮಾಡಿತು. ಮೂಸಾ ಪ್ರಜ್ಞೆ ತಪ್ಪಿ ಬಿದ್ದರು. ನಂತರ ಪ್ರಜ್ಞೆ ಬಂದಾಗ ಅವರು ಹೇಳಿದರು: “ನೀನು ಪರಿಶುದ್ಧನು. ನಾನು ನಿನ್ನ ಬಳಿಗೆ ಪಶ್ಚಾತ್ತಾಪದಿಂದ ಮರಳಿದ್ದೇನೆ. ನಾನು ಸತ್ಯವಿಶ್ವಾಸಿಗಳಲ್ಲಿ ಮೊದಲಿಗನಾಗಿದ್ದೇನೆ.”