وَلَمَّا رَجَعَ مُوسَىٰٓ إِلَىٰ قَوْمِهِۦ غَضْبَٰنَ أَسِفًا قَالَ بِئْسَمَا خَلَفْتُمُونِى مِنۢ بَعْدِىٓ أَعَجِلْتُمْ أَمْرَ رَبِّكُمْ وَأَلْقَى ٱلْأَلْوَاحَ وَأَخَذَ بِرَأْسِ أَخِيهِ يَجُرُّهُۥٓ إِلَيْهِ قَالَ ٱبْنَ أُمَّ إِنَّ ٱلْقَوْمَ ٱسْتَضْعَفُونِى وَكَادُوا۟ يَقْتُلُونَنِى فَلَا تُشْمِتْ بِىَ ٱلْأَعْدَآءَ وَلَا تَجْعَلْنِى مَعَ ٱلْقَوْمِ ٱلظَّٰلِمِينَ
Kannada Translation - Hamza Buturಮೂಸಾ ತಮ್ಮ ಜನರ ಬಳಿಗೆ ಮರಳಿ ಬಂದಾಗ—ಅವರು ಕೋಪ ಮತ್ತು ಬೇಸರದಿಂದ ಹೇಳಿದರು: “ನನ್ನ ನಿರ್ಗಮನದ ಬಳಿಕ ನೀವು ಮಾಡಿದ ಕೃತ್ಯವು ಅತ್ಯಂತ ಹೇಯವಾಗಿದೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆ ಬರುವುದಕ್ಕೆ ಮೊದಲೇ ನೀವು ಅವಸರಪಟ್ಟಿರಾ?” ಅವರು ಹಲಗೆಗಳನ್ನು ಎಸೆದು ಸಹೋದರನ ತಲೆಗೂದಲನ್ನು ಹಿಡಿದು ಎಳೆದರು. ಅವರು (ಸಹೋದರ) ಹೇಳಿದರು: “ನನ್ನ ತಾಯಿಯ ಮಗನೇ! ನಿಶ್ಚಯವಾಗಿಯೂ ಈ ಜನರು ನನ್ನನ್ನು ದುರ್ಬಲನೆಂದು ಪರಿಗಣಿಸಿದರು. ಅವರು ನನ್ನನ್ನು ಇನ್ನೇನು ಕೊಲ್ಲುವುದರಲ್ಲಿದ್ದರು. ನನ್ನ ಮೇಲೆ ಹಲ್ಲೆ ಮಾಡಿ ವೈರಿಗಳಿಗೆ ಸಂತಸವಾಗುವಂತೆ ಮಾಡಬೇಡ. ಅಕ್ರಮಿಗಳ ಸಾಲಿಗೆ ನನ್ನನ್ನು ಕೂಡ ಸೇರಿಸಿ ಬಿಡಬೇಡ.”