قَالَ ٱدْخُلُوا۟ فِىٓ أُمَمٍ قَدْ خَلَتْ مِن قَبْلِكُم مِّنَ ٱلْجِنِّ وَٱلْإِنسِ فِى ٱلنَّارِ كُلَّمَا دَخَلَتْ أُمَّةٌ لَّعَنَتْ أُخْتَهَا حَتَّىٰٓ إِذَا ٱدَّارَكُوا۟ فِيهَا جَمِيعًا قَالَتْ أُخْرَىٰهُمْ لِأُولَىٰهُمْ رَبَّنَا هَٰٓؤُلَآءِ أَضَلُّونَا فَـَٔاتِهِمْ عَذَابًا ضِعْفًا مِّنَ ٱلنَّارِ قَالَ لِكُلٍّ ضِعْفٌ وَلَٰكِن لَّا تَعْلَمُونَ
Kannada Translation - Hamza Buturಅಲ್ಲಾಹು ಹೇಳುವನು: “ನಿಮಗಿಂತ ಮೊದಲು ತೀರಿಹೋದ ಜಿನ್ನ್ ಮತ್ತು ಮನುಷ್ಯರ ಸಮುದಾಯಗಳೊಂದಿಗೆ ನೀವು ಕೂಡ ನರಕವನ್ನು ಪ್ರವೇಶಿಸಿರಿ.” ಒಂದೊಂದು ಸಮುದಾಯದವರು ಅದನ್ನು ಪ್ರವೇಶಿಸುವಾಗಲೆಲ್ಲಾ ಅವರಿಗಿಂತ ಮೊದಲಿನ ಸಮುದಾಯವನ್ನು ಶಪಿಸುವರು. ಎಲ್ಲಿಯವರೆಗೆಂದರೆ, ಅವರೆಲ್ಲರೂ ಅಲ್ಲಿ ಒಟ್ಟು ಸೇರಿದಾಗ ನಂತರ ಬಂದವರು ಮೊದಲು ಬಂದವರ ಬಗ್ಗೆ ಹೇಳುವರು: “ಓ ನಮ್ಮ ಪರಿಪಾಲಕನೇ! ಇವರೇ ನಮ್ಮನ್ನು ದಾರಿ ತಪ್ಪಿಸಿದವರು. ಆದ್ದರಿಂದ ಇವರಿಗೆ ನರಕದ ಇಮ್ಮಡಿ ಶಿಕ್ಷೆಯನ್ನು ನೀಡು.” ಅಲ್ಲಾಹು ಹೇಳುವನು: “ಎಲ್ಲರಿಗೂ ಇಮ್ಮಡಿ ಶಿಕ್ಷೆಯಿದೆ. ಆದರೆ ನೀವು ತಿಳಿಯುವುದಿಲ್ಲ.”