وَإِلَىٰ مَدْيَنَ أَخَاهُمْ شُعَيْبًا قَالَ يَٰقَوْمِ ٱعْبُدُوا۟ ٱللَّهَ مَا لَكُم مِّنْ إِلَٰهٍ غَيْرُهُۥ قَدْ جَآءَتْكُم بَيِّنَةٌ مِّن رَّبِّكُمْ فَأَوْفُوا۟ ٱلْكَيْلَ وَٱلْمِيزَانَ وَلَا تَبْخَسُوا۟ ٱلنَّاسَ أَشْيَآءَهُمْ وَلَا تُفْسِدُوا۟ فِى ٱلْأَرْضِ بَعْدَ إِصْلَٰحِهَا ذَٰلِكُمْ خَيْرٌ لَّكُمْ إِن كُنتُم مُّؤْمِنِينَ
Kannada Translation - Hamza Buturಮದ್ಯನ್ ಗೋತ್ರದವರ ಬಳಿಗೆ ಅವರ ಸಹೋದರ ಶುಐಬರನ್ನು (ನಾವು ಕಳುಹಿಸಿದೆವು). ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ನಿಮಗೆ ಅವನ ಹೊರತು ಬೇರೆ ದೇವರಿಲ್ಲ. ನಿಶ್ಚಯವಾಗಿಯೂ ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟ ಸಾಕ್ಷ್ಯಾಧಾರಗಳು ಬಂದಿವೆ. ನೀವು ಅಳತೆ ಮತ್ತು ತೂಕವನ್ನು ಪೂರ್ತಿಯಾಗಿ ನೀಡಿರಿ. ಜನರಿಗೆ ಅವರ ಸಾಮಗ್ರಿಗಳನ್ನು ಕಡಿಮೆಗೊಳಿಸಬೇಡಿ. ಭೂಮಿಯಲ್ಲಿ ಸುಧಾರಣೆ ಮಾಡಿದ ಬಳಿಕ ಅಲ್ಲಿ ಕಿಡಿಗೇಡಿತನ ಮಾಡಬೇಡಿ. ಇದು ನಿಮಗೆ ಉತ್ತಮವಾಗಿದೆ. ನೀವು ಸತ್ಯವಿಶ್ವಾಸಿಗಳಾಗಿದ್ದರೆ.