وَمَا جَعَلْنَآ أَصْحَٰبَ ٱلنَّارِ إِلَّا مَلَٰٓئِكَةً وَمَا جَعَلْنَا عِدَّتَهُمْ إِلَّا فِتْنَةً لِّلَّذِينَ كَفَرُوا۟ لِيَسْتَيْقِنَ ٱلَّذِينَ أُوتُوا۟ ٱلْكِتَٰبَ وَيَزْدَادَ ٱلَّذِينَ ءَامَنُوٓا۟ إِيمَٰنًا وَلَا يَرْتَابَ ٱلَّذِينَ أُوتُوا۟ ٱلْكِتَٰبَ وَٱلْمُؤْمِنُونَ وَلِيَقُولَ ٱلَّذِينَ فِى قُلُوبِهِم مَّرَضٌ وَٱلْكَٰفِرُونَ مَاذَآ أَرَادَ ٱللَّهُ بِهَٰذَا مَثَلًا كَذَٰلِكَ يُضِلُّ ٱللَّهُ مَن يَشَآءُ وَيَهْدِى مَن يَشَآءُ وَمَا يَعْلَمُ جُنُودَ رَبِّكَ إِلَّا هُوَ وَمَا هِىَ إِلَّا ذِكْرَىٰ لِلْبَشَرِ
Kannada Translation - Hamza Buturನಾವು ನರಕದ ಕಾವಲುಗಾರರಾಗಿ ಕೇವಲ ದೇವದೂತರುಗಳನ್ನು ಮಾತ್ರ ನಿಶ್ಚಯಿಸಿದ್ದೇವೆ. ನಾವು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಿದ್ದೇವೆ.[1] ಇದೇಕೆಂದರೆ, ಗ್ರಂಥ ನೀಡಲಾದವರಿಗೆ ದೃಢವಿಶ್ವಾಸ ಉಂಟಾಗಲೆಂದು[2] ಮತ್ತು ಸತ್ಯವಿಶ್ವಾಸಿಗಳ ವಿಶ್ವಾಸವು ಇನ್ನಷ್ಟು ಹೆಚ್ಚಾಗಲೆಂದು. ಅದೇ ರೀತಿ ಗ್ರಂಥ ನೀಡಲಾದವರು ಹಾಗೂ ಸತ್ಯವಿಶ್ವಾಸಿಗಳು ಸಂಶಯ ಪಡದಿರಲೆಂದು ಮತ್ತು ಹೃದಯದಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು, “ಈ ವಿವರಣೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಎಂದು ಕೇಳಲೆಂದು. ಈ ರೀತಿ ಅಲ್ಲಾಹು ಅವನು ಇಚ್ಛಿಸಿದವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸೈನ್ಯವನ್ನು ಅವನ ಹೊರತು ಯಾರೂ ತಿಳಿದಿಲ್ಲ. ಅದು (ನರಕ) ಮನುಷ್ಯರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.