وَعَلَى ٱلثَّلَٰثَةِ ٱلَّذِينَ خُلِّفُوا۟ حَتَّىٰٓ إِذَا ضَاقَتْ عَلَيْهِمُ ٱلْأَرْضُ بِمَا رَحُبَتْ وَضَاقَتْ عَلَيْهِمْ أَنفُسُهُمْ وَظَنُّوٓا۟ أَن لَّا مَلْجَأَ مِنَ ٱللَّهِ إِلَّآ إِلَيْهِ ثُمَّ تَابَ عَلَيْهِمْ لِيَتُوبُوٓا۟ إِنَّ ٱللَّهَ هُوَ ٱلتَّوَّابُ ٱلرَّحِيمُ
Kannada Translation - Hamza Buturತೀರ್ಪು ಕಾದಿರಿಸಲಾದ ಆ ಮೂವರನ್ನೂ (ಅಲ್ಲಾಹು ಕ್ಷಮಿಸಿದ್ದಾನೆ).[1] ಎಲ್ಲಿಯವರೆಗೆಂದರೆ, ಭೂಮಿಯು ವಿಶಾಲವಾಗಿದ್ದೂ ಸಹ ಅವರಿಗೆ ಅದು ಇಕ್ಕಟ್ಟಾದಂತೆ ತೋರಿತು, ಅವರ ಹೃದಯಗಳು ಅವರಿಗೆ ಇಕ್ಕಟ್ಟಾಗಿ ಪರಿಣಮಿಸಿತು ಮತ್ತು ಅಲ್ಲಾಹನಿಗೆ ವಿರುದ್ಧವಾಗಿ ಅವನ ಬಳಿಯೇ ಹೊರತು ಬೇರೆ ಆಶ್ರಯವಿಲ್ಲವೆಂದು ಅವರಿಗೆ ಖಾತ್ರಿಯಾಯಿತು. ಆದ್ದರಿಂದ ಅವರು ಪಶ್ಚಾತ್ತಾಪಪಟ್ಟು ಮರಳುವುದಕ್ಕಾಗಿ ಅಲ್ಲಾಹು ಅವರನ್ನು ಕ್ಷಮಿಸಿದನು. ನಿಶ್ಚಯವಾಗಿಯೂ ಅಲ್ಲಾಹು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.