وَأَذَٰنٌ مِّنَ ٱللَّهِ وَرَسُولِهِۦٓ إِلَى ٱلنَّاسِ يَوْمَ ٱلْحَجِّ ٱلْأَكْبَرِ أَنَّ ٱللَّهَ بَرِىٓءٌ مِّنَ ٱلْمُشْرِكِينَ وَرَسُولُهُۥ فَإِن تُبْتُمْ فَهُوَ خَيْرٌ لَّكُمْ وَإِن تَوَلَّيْتُمْ فَٱعْلَمُوٓا۟ أَنَّكُمْ غَيْرُ مُعْجِزِى ٱللَّهِ وَبَشِّرِ ٱلَّذِينَ كَفَرُوا۟ بِعَذَابٍ أَلِيمٍ
Kannada Translation - Hamza Buturಇದು ಜನರಿಗೆ ಮಹಾ ಹಜ್ಜ್ನ ದಿನದಂದು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಕಡೆಯ ಘೋಷಣೆಯಾಗಿದೆ—ಏನೆಂದರೆ ಅಲ್ಲಾಹು ಮತ್ತು ಅವರ ಸಂದೇಶವಾಹಕರು ಬಹುದೇವವಿಶ್ವಾಸಿಗಳಿಂದ ಸಂಪೂರ್ಣ ಮುಕ್ತರಾಗಿದ್ದಾರೆ. ನೀವು (ಬಹುದೇವವಿಶ್ವಾಸಿಗಳು) ಪಶ್ಚಾತ್ತಾಪಪಟ್ಟರೆ ಅದು ನಿಮಗೆ ಒಳಿತಾಗಿದೆ. ನೀವು ಲೆಕ್ಕಿಸದೆ ತಿರುಗಿ ನಡೆದರೆ ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನನ್ನು ಸೋಲಿಸಲು ನಿಮ್ಮಿಂದ ಸಾಧ್ಯವಿಲ್ಲ. ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯ ಬಗ್ಗೆ ಸುವಾರ್ತೆ ನೀಡಿರಿ.