يَحْلِفُونَ بِٱللَّهِ مَا قَالُوا۟ وَلَقَدْ قَالُوا۟ كَلِمَةَ ٱلْكُفْرِ وَكَفَرُوا۟ بَعْدَ إِسْلَٰمِهِمْ وَهَمُّوا۟ بِمَا لَمْ يَنَالُوا۟ وَمَا نَقَمُوٓا۟ إِلَّآ أَنْ أَغْنَىٰهُمُ ٱللَّهُ وَرَسُولُهُۥ مِن فَضْلِهِۦ فَإِن يَتُوبُوا۟ يَكُ خَيْرًا لَّهُمْ وَإِن يَتَوَلَّوْا۟ يُعَذِّبْهُمُ ٱللَّهُ عَذَابًا أَلِيمًا فِى ٱلدُّنْيَا وَٱلْـَٔاخِرَةِ وَمَا لَهُمْ فِى ٱلْأَرْضِ مِن وَلِىٍّ وَلَا نَصِيرٍ
Kannada Translation - Hamza Buturನಾವು (ಪ್ರವಾದಿಯ ವಿರುದ್ಧ ಏನೂ) ಹೇಳಿಲ್ಲವೆಂದು ಅವರು (ಕಪಟವಿಶ್ವಾಸಿಗಳು) ಅಲ್ಲಾಹನ ಮೇಲೆ ಆಣೆ ಮಾಡಿ ಹೇಳುತ್ತಾರೆ. ಆದರೆ (ವಾಸ್ತವದಲ್ಲಿ) ಅವರು ಸತ್ಯನಿಷೇಧದ ಮಾತನ್ನೇ ಹೇಳಿದ್ದಾರೆ. ಇಸ್ಲಾಮ್ ಸ್ವೀಕರಿಸಿದ ಬಳಿಕ ಅವರು ಸತ್ಯನಿಷೇಧಿಗಳಾಗಿ ಮಾರ್ಪಟ್ಟಿದ್ದಾರೆ. ಅವರಿಗೆ ಮಾಡಲು ಸಾಧ್ಯವಾಗದ ಸಂಗತಿಗಾಗಿ (ಪ್ರವಾದಿಯ ಹತ್ಯೆಗಾಗಿ) ಅವರು ಹವಣಿಸಿದ್ದರು. ಅಲ್ಲಾಹು ಅವನ ಔದಾರ್ಯದಿಂದ ಅವರನ್ನು ಶ್ರೀಮಂತಗೊಳಿಸಿದನು ಮತ್ತು ಅವನ ಸಂದೇಶವಾಹಕರು ಕೂಡ (ಅವರನ್ನು ಶ್ರೀಮಂತಗೊಳಿಸಿದರು) ಎಂಬುದಲ್ಲದೆ ಅವರ ಪ್ರತೀಕಾರಕ್ಕೆ ಬೇರೇನು ಕಾರಣವಿದೆ? ಅವರು ಪಶ್ಚಾತ್ತಾಪಪಟ್ಟು ಮರಳಿದರೆ ಅದು ಅವರಿಗೇ ಒಳ್ಳೆಯದು. ಅವರು ಬೆನ್ನು ತೋರಿಸಿ ನಡೆದರೆ, ಅಲ್ಲಾಹು ಅವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ಯಾತನಾಮಯ ಶಿಕ್ಷೆಯನ್ನು ನೀಡುವನು. ಭೂಮಿಯಲ್ಲಿ ಅವರಿಗೆ ಯಾವುದೇ ರಕ್ಷಕರು ಅಥವಾ ಸಹಾಯಕರು ಇರಲಾರರು.